ಆರ್ ಎಸ್ಎಎಸ್ 
ದೇಶ

ಉತ್ತರ ಪ್ರದೇಶ: ಆರ್ ಎಸ್ಎಎಸ್ ನ ಮುಸ್ಲಿಂ ಅಂಗಸಂಸ್ಥೆಯಿಂದ ಇಫ್ತಾರ್ ಕೂಟ; ಹಾಲಿನ ಉತ್ಪನ್ನ ಮಾತ್ರ ಬಳಕೆ!

ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯ ಮುಸ್ಲಿಂ ಅಂಗಸಂಸ್ಥೆ ಮುಸ್ಲಿಮ್ ರಾಷ್ಟ್ರೀಯ ಮಂಚ್(ಎಂಆರ್ ಎಂ) ಉತ್ತರ ಪ್ರದೇಶದಲ್ಲಿ ಈ ಬಾರಿಯ ರಂಜಾನ್ ನ್ನು ವಿನೂತನ ರೀತಿಯಲ್ಲಿ ಆಚರಿಸಲು ನಿರ್ಧರಿಸಿದೆ

ಲಖನೌ: ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯ ಮುಸ್ಲಿಂ ಅಂಗಸಂಸ್ಥೆ ಮುಸ್ಲಿಮ್ ರಾಷ್ಟ್ರೀಯ ಮಂಚ್(ಎಂಆರ್ ಎಂ) ಉತ್ತರ ಪ್ರದೇಶದಲ್ಲಿ ಈ ಬಾರಿಯ ರಂಜಾನ್ ನ್ನು ವಿನೂತನ ರೀತಿಯಲ್ಲಿ ಆಚರಿಸಲು ನಿರ್ಧರಿಸಿದ್ದು, ರಂಜಾನ್ ಅಂಗವಾಗಿ ಆಯೋಜಿಸಲಾಗುವ ಇಫ್ತಾರ್ ಕೂಟವನ್ನು ಸಸ್ಯಹಾರಿಯಾಗಿಸಲು ತೀರ್ಮಾನಿಸಿದೆ. 
ಗೋವು ಉಳಿಸಿ ಅಭಿಯಾನದ ಸಂದೇಶ ಸಾರಲು ರಂಜಾನ್ ವೇಳೆ ಆಯೋಜಿಸಲಾಗುವ ಇಫ್ತಾರ್ ಕೂಟದಲ್ಲಿ ಕೇವಲ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನಷ್ಟೇ ಬಳಕೆ ಮಾಡಲು ಎಂಆರ್ ಎಂ ತೀರ್ಮಾನಿಸಿದೆ ಎಂದು ಸಂಘಟನೆಯ ರಾಷ್ಟ್ರೀಯ ಸಹ ಸಂಚಾಲಕ ಮಹಿರಾಜ್ ಧ್ವಜ್ ಸಿಂಗ್ ಹೇಳಿದ್ದಾರೆ. 
ರಂಜಾನ್ ವೇಳೆ ಉಪವಾಸ ಕೈಗೂಳ್ಳುವ ಮುಸ್ಲಿಮ್ ಬಾಂಧವರು ಗೋವಿನ ಹಾಲನ್ನು ಸೇವಿಸಿ ದಿನದ ಉಪವಾಸವನ್ನು ಅಂತ್ಯಗೊಳಿಸುತ್ತಾರೆ ಹಾಗೂ ಇಫ್ತಾರ್ ಕೂಟದಲ್ಲಿ ಗೋವಿನ ಉತ್ಪನ್ನಗಳನ್ನು ಬಳಕೆ ಮಾಡುತ್ತಾರೆ ಎಂದು ಮಹಿರಾಜ್ ಧ್ವಜ್ ಸಿಂಗ್ ತಿಳಿಸಿದ್ದಾರೆ. 
ಉತ್ತರ ಪ್ರದೇಶದಲ್ಲಿ ಇದೇ ಮೊದಲ ಬಾರಿಗೆ ಇಂಥಹದ್ದೊಂದು ಇಫ್ತಾರ್ ಕೂಟ ನಡೆಯುತ್ತಿದ್ದು, ಹಾಲಿನ ಉತ್ಪನ್ನಗಳು ಆರೋಗ್ಯಕ್ಕೆ ಒಳ್ಳೆಯದು ಎಂಬುದನ್ನು ಮುಸ್ಲಿಮ್ ಸಮುದಾಯದ ವಿದ್ವಾಂಸರೂ ಸಹ ಒಪ್ಪಿದ್ದಾರೆ, ಗೋ ಸಂರಕ್ಷಣೆಗಾಗಿ ರಂಜಾನ್ ವೇಳೆ ಮುಸ್ಲಿಮ್ ಬಾಂಧವರು ಪ್ರಾರ್ಥನೆ ನಡೆಸಲಿದ್ದಾರೆ ಎಂದು ಆರ್ ಎಸ್ಎಸ್ ತಿಳಿಸಿದೆ. 
ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆಯ ಅಂಗ ಸಂಸ್ಥೆಯ ನಿರ್ಧಾರವನ್ನು ಉತ್ತರ ಪ್ರದೇಶದ ಅನೇಕ ಮುಸ್ಲಿಮ್ ಸಂಘಟನೆಗಳೂ ಸಹ ಸ್ವಾಗತಿಸಿದ್ದು, ಇಫ್ತಾರ್ ವೇಳೆ ಹಾಲಿನ ಉತ್ಪನ್ನಗಳನ್ನು ಬಳಕೆ ಮಾಡುವುದಕ್ಕೆ ನಮ್ಮ ಅಭ್ಯಂತರವಿಲ್ಲ,  ಮುಸ್ಲಿಮ್ ರಾಷ್ಟ್ರೀಯ ಮಂಚ್ ನ ನಿರ್ಧಾರವನ್ನು ಸ್ವಾಗತಿಸುತ್ತೇವೆ ಎಂದು ಮುಸ್ಲಿಮ್ ಸಮುದಾಯದ ನಾಯಕ ವೇಸೀಮ್ ರೈನಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

SCROLL FOR NEXT