ಮಿಸಾ ಭಾರತಿ 
ದೇಶ

ಲಾಲು ಪುತ್ರಿ ಮಿಸಾ ಭಾರತಿಯ ಸಿಎಯನ್ನು ಬಂಧಿಸಿದ ಜಾರಿ ನಿರ್ದೇಶನಾಲಯ

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಲಾಲು ಪ್ರಸಾದ್ ಯಾದವ್ ಪುತ್ರಿ ಮಿಸಾ ಭಾರತಿ ಅವರ ಸಿಎ(ಲೆಕ್ಕ ಪರಿಶೋಧಕ) ರಾಜೇಶ್ ಅಗರ್ವಾಲ್ ಅವರನ್ನು ಬಂಧಿಸಿದ್ದಾರೆ.

ನವದೆಹಲಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಲಾಲು ಪ್ರಸಾದ್ ಯಾದವ್ ಪುತ್ರಿ ಮಿಸಾ ಭಾರತಿ ಅವರ ಸಿಎ(ಲೆಕ್ಕ ಪರಿಶೋಧಕ) ರಾಜೇಶ್ ಅಗರ್ವಾಲ್ ಅವರನ್ನು ಬಂಧಿಸಿದ್ದಾರೆ. 
ಕಪ್ಪು ಹಣವನ್ನು ಸಕ್ರಮವಾಗಿಸುವ ದಂಧೆಯಲ್ಲಿ ರಾಜೇಶ್ ಅಗರ್ವಾಲ್ ಅವರು ಶಾಮೀಲಾಗಿದ್ದಿದ್ದರಿಂದ ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಕಪ್ಪುಹಣವನ್ನು ಸಕ್ರಮ ಮಾಡಿಕೊಳ್ಳಲು ಯತ್ನಿಸಿದ್ದ ರಾಜೇಶ್ ಅವರ್ಗಾಲ್ ಹಾಗೂ ಎಸ್.ಕೆ ಜೈನ್ ಹಾಗೂ ವಿಕೆ ಜೈನ್ ಸಹೋದರರು ನಡೆಸಿದ್ದ ಹಣದ ವಹಿವಾಟುಗಳು ಅನುಮಾನಾಸ್ಪದವಾಗಿದ್ದರು. ಈ ಹಿನ್ನೆಲೆಯಲ್ಲಿ ಮಾ.20 ರಂದು ಜೈನ್ ಸಹೋದರರನ್ನು ಬಂಧಿಸಲಾಗಿತ್ತು. 
ಕೇವಲ ಹಣವರ್ಗಾವಣೆ ಮಾಡುವುದಕ್ಕಾಗಿಯೇ ಹೆಸರಿಗಷ್ಟೇ ಇರುವ 90 ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ಕಣ್ಣಿಟ್ಟಿದ್ದು, ರಾಜೇಶ್ ಅಗರ್ವಾಲ್ ವಿರುದ್ಧ ಮಿಸಾ ಭಾರತಿ ಪತಿಯ ಕಂಪನಿಗೂ ಸಹಾಯ ಮಾಡಿರುವ ಆರೋಪ ಕೇಳಿಬಂದಿದೆ. ಲಾಲು ಪ್ರಸಾದ್ ಯಾದವ್ ಬೇನಾಮೆ ಆಸ್ತಿಗೆ ಸಂಬಂಧಿಸಿದಂತೆ ಮೇ.16 ರಂದು ಐಟಿ ನವದೆಹಲಿಯ 22 ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಈ ಪ್ರಕರಣದ ಭಾಗವಾಗಿಯೇ ಈಗ ಮಿಸಾ ಭಾರತಿ ಸಿಎಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT