ಮಿಸಾ ಭಾರತಿ 
ದೇಶ

ಲಾಲು ಪುತ್ರಿ ಮಿಸಾ ಭಾರತಿಯ ಸಿಎಯನ್ನು ಬಂಧಿಸಿದ ಜಾರಿ ನಿರ್ದೇಶನಾಲಯ

ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಲಾಲು ಪ್ರಸಾದ್ ಯಾದವ್ ಪುತ್ರಿ ಮಿಸಾ ಭಾರತಿ ಅವರ ಸಿಎ(ಲೆಕ್ಕ ಪರಿಶೋಧಕ) ರಾಜೇಶ್ ಅಗರ್ವಾಲ್ ಅವರನ್ನು ಬಂಧಿಸಿದ್ದಾರೆ.

ನವದೆಹಲಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಲಾಲು ಪ್ರಸಾದ್ ಯಾದವ್ ಪುತ್ರಿ ಮಿಸಾ ಭಾರತಿ ಅವರ ಸಿಎ(ಲೆಕ್ಕ ಪರಿಶೋಧಕ) ರಾಜೇಶ್ ಅಗರ್ವಾಲ್ ಅವರನ್ನು ಬಂಧಿಸಿದ್ದಾರೆ. 
ಕಪ್ಪು ಹಣವನ್ನು ಸಕ್ರಮವಾಗಿಸುವ ದಂಧೆಯಲ್ಲಿ ರಾಜೇಶ್ ಅಗರ್ವಾಲ್ ಅವರು ಶಾಮೀಲಾಗಿದ್ದಿದ್ದರಿಂದ ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಕಪ್ಪುಹಣವನ್ನು ಸಕ್ರಮ ಮಾಡಿಕೊಳ್ಳಲು ಯತ್ನಿಸಿದ್ದ ರಾಜೇಶ್ ಅವರ್ಗಾಲ್ ಹಾಗೂ ಎಸ್.ಕೆ ಜೈನ್ ಹಾಗೂ ವಿಕೆ ಜೈನ್ ಸಹೋದರರು ನಡೆಸಿದ್ದ ಹಣದ ವಹಿವಾಟುಗಳು ಅನುಮಾನಾಸ್ಪದವಾಗಿದ್ದರು. ಈ ಹಿನ್ನೆಲೆಯಲ್ಲಿ ಮಾ.20 ರಂದು ಜೈನ್ ಸಹೋದರರನ್ನು ಬಂಧಿಸಲಾಗಿತ್ತು. 
ಕೇವಲ ಹಣವರ್ಗಾವಣೆ ಮಾಡುವುದಕ್ಕಾಗಿಯೇ ಹೆಸರಿಗಷ್ಟೇ ಇರುವ 90 ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ಕಣ್ಣಿಟ್ಟಿದ್ದು, ರಾಜೇಶ್ ಅಗರ್ವಾಲ್ ವಿರುದ್ಧ ಮಿಸಾ ಭಾರತಿ ಪತಿಯ ಕಂಪನಿಗೂ ಸಹಾಯ ಮಾಡಿರುವ ಆರೋಪ ಕೇಳಿಬಂದಿದೆ. ಲಾಲು ಪ್ರಸಾದ್ ಯಾದವ್ ಬೇನಾಮೆ ಆಸ್ತಿಗೆ ಸಂಬಂಧಿಸಿದಂತೆ ಮೇ.16 ರಂದು ಐಟಿ ನವದೆಹಲಿಯ 22 ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಈ ಪ್ರಕರಣದ ಭಾಗವಾಗಿಯೇ ಈಗ ಮಿಸಾ ಭಾರತಿ ಸಿಎಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT