ಜೀಪ್ ಮುಂಭಾಗಕ್ಕೆ ಯುವಕನನ್ನು ಕಟ್ಟಿದ್ದ ಅಧಿಕಾರಿ 
ದೇಶ

ಜೀಪ್ ಮುಂಭಾಗಕ್ಕೆ ಕಾಶ್ಮೀರಿ ಯುವಕನನ್ನು ಕಟ್ಟಿದ್ದ ಅಧಿಕಾರಿಗೆ ಸೇನಾ ಗೌರವ

ಜಮ್ಮು ಮತ್ತು ಕಾಶ್ಮೀರದಲ್ಲಿ ಕಲ್ಲು ತೂರಾಟ ನಡೆಸುವವರಿಂದ ರಕ್ಷಣೆ ಪಡೆಯುವ ಸಲುವಾಗಿ ಜೀಪ್​ನ ಮುಂಭಾಗಕ್ಕೆ ಕಾಶ್ಮೀರಿ ಯುವಕನನ್ನು ಕಟ್ಟಿದ್ದ ಮೇಜರ್ ...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಲ್ಲು ತೂರಾಟ ನಡೆಸುವವರಿಂದ ರಕ್ಷಣೆ ಪಡೆಯುವ ಸಲುವಾಗಿ ಜೀಪ್​ನ ಮುಂಭಾಗಕ್ಕೆ ಕಾಶ್ಮೀರಿ ಯುವಕನನ್ನು ಕಟ್ಟಿದ್ದ ಮೇಜರ್ ಲೀತುಲ್ ಗೊಗೋಯ್ ಅವರಿಗೆ ಸೇನಾ ಮುಖ್ಯಸ್ಥರು ಪ್ರಶಂಸಾ ಪತ್ರವನ್ನು ನೀಡಿ ಗೌರವಿಸಿದ್ದಾರೆ.
ಪ್ರತಿಭಟನಾ ನಿರತರ ವಿರುದ್ಧದ ಕಾರ್ಯಾಚರಣೆಯಲ್ಲಿ ಮೇಜರ್ ಗೊಗಯ್ ಅವರು ತೆಗೆದುಕೊಂಡ ತಕ್ಷಣದ ನಿರ್ಧಾರವನ್ನು ಪ್ರಶಂಸಿಸಿ ಸೇನಾ ಮುಖ್ಯಸ್ಥರು ಪ್ರಶಂಸಾ ಪತ್ರವನ್ನು ನೀಡಿದ್ದಾರೆ.
ಕಳೆದ ವಾರ ಜನರಲ್ ಬಿಪಿನ್ ರಾವತ್ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮೇಜರ್ ಗೊಗೋಯ್ ಅವರಿಗೆ ಪ್ರಶಂಸಾ ಪತ್ರ ನೀಡಿದ್ದಾರೆ ಎಂದು ಸೇನೆಯ ಮೂಲಗಳು ತಿಳಿಸಿವೆ.
ಏಪ್ರಿಲ್ 9 ರಂದು ಶ್ರೀನಗರ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಸಂದರ್ಭದಲ್ಲಿ ಈ ಘಟನೆ ನಡೆದಿತ್ತು. ಮತದಾನದ ದಿನ ಭದ್ರತಾ ಕಾರ್ಯಕ್ಕೆ ನಿಯೋಜಿತರಾಗಿದ್ದ ಮೇ. ಗೊಗೋಯ್ ಮತ್ತು ಅವರ ತಂಡ ಕಲ್ಲು ತೂರಾಟ ನಡೆಸುತ್ತಿದ್ದವರಿಂದ ರಕ್ಷಣೆ ಪಡೆಯುವ ಸಲುವಾಗಿ ಕಾಶ್ಮೀರಿ ಯುವಕನೊಬ್ಬನನ್ನು ಜೀಪ್ ಮುಂಭಾಗಕ್ಕೆ ಕಟ್ಟಿದ್ದ ವೀಡಿಯೋ ಸಾಕಷ್ಟು ವೈರಲ್ ಆಗಿತ್ತು. ಆ ನಂತರ ಸೇನೆಯ ಕ್ರಮವನ್ನು ಹಲವರು ಟೀಕಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT