ಜೀಪ್ ಮುಂಭಾಗಕ್ಕೆ ಯುವಕನನ್ನು ಕಟ್ಟಿದ್ದ ಅಧಿಕಾರಿ 
ದೇಶ

ಜೀಪ್ ಮುಂಭಾಗಕ್ಕೆ ಕಾಶ್ಮೀರಿ ಯುವಕನನ್ನು ಕಟ್ಟಿದ್ದ ಅಧಿಕಾರಿಗೆ ಸೇನಾ ಗೌರವ

ಜಮ್ಮು ಮತ್ತು ಕಾಶ್ಮೀರದಲ್ಲಿ ಕಲ್ಲು ತೂರಾಟ ನಡೆಸುವವರಿಂದ ರಕ್ಷಣೆ ಪಡೆಯುವ ಸಲುವಾಗಿ ಜೀಪ್​ನ ಮುಂಭಾಗಕ್ಕೆ ಕಾಶ್ಮೀರಿ ಯುವಕನನ್ನು ಕಟ್ಟಿದ್ದ ಮೇಜರ್ ...

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಲ್ಲು ತೂರಾಟ ನಡೆಸುವವರಿಂದ ರಕ್ಷಣೆ ಪಡೆಯುವ ಸಲುವಾಗಿ ಜೀಪ್​ನ ಮುಂಭಾಗಕ್ಕೆ ಕಾಶ್ಮೀರಿ ಯುವಕನನ್ನು ಕಟ್ಟಿದ್ದ ಮೇಜರ್ ಲೀತುಲ್ ಗೊಗೋಯ್ ಅವರಿಗೆ ಸೇನಾ ಮುಖ್ಯಸ್ಥರು ಪ್ರಶಂಸಾ ಪತ್ರವನ್ನು ನೀಡಿ ಗೌರವಿಸಿದ್ದಾರೆ.
ಪ್ರತಿಭಟನಾ ನಿರತರ ವಿರುದ್ಧದ ಕಾರ್ಯಾಚರಣೆಯಲ್ಲಿ ಮೇಜರ್ ಗೊಗಯ್ ಅವರು ತೆಗೆದುಕೊಂಡ ತಕ್ಷಣದ ನಿರ್ಧಾರವನ್ನು ಪ್ರಶಂಸಿಸಿ ಸೇನಾ ಮುಖ್ಯಸ್ಥರು ಪ್ರಶಂಸಾ ಪತ್ರವನ್ನು ನೀಡಿದ್ದಾರೆ.
ಕಳೆದ ವಾರ ಜನರಲ್ ಬಿಪಿನ್ ರಾವತ್ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮೇಜರ್ ಗೊಗೋಯ್ ಅವರಿಗೆ ಪ್ರಶಂಸಾ ಪತ್ರ ನೀಡಿದ್ದಾರೆ ಎಂದು ಸೇನೆಯ ಮೂಲಗಳು ತಿಳಿಸಿವೆ.
ಏಪ್ರಿಲ್ 9 ರಂದು ಶ್ರೀನಗರ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಸಂದರ್ಭದಲ್ಲಿ ಈ ಘಟನೆ ನಡೆದಿತ್ತು. ಮತದಾನದ ದಿನ ಭದ್ರತಾ ಕಾರ್ಯಕ್ಕೆ ನಿಯೋಜಿತರಾಗಿದ್ದ ಮೇ. ಗೊಗೋಯ್ ಮತ್ತು ಅವರ ತಂಡ ಕಲ್ಲು ತೂರಾಟ ನಡೆಸುತ್ತಿದ್ದವರಿಂದ ರಕ್ಷಣೆ ಪಡೆಯುವ ಸಲುವಾಗಿ ಕಾಶ್ಮೀರಿ ಯುವಕನೊಬ್ಬನನ್ನು ಜೀಪ್ ಮುಂಭಾಗಕ್ಕೆ ಕಟ್ಟಿದ್ದ ವೀಡಿಯೋ ಸಾಕಷ್ಟು ವೈರಲ್ ಆಗಿತ್ತು. ಆ ನಂತರ ಸೇನೆಯ ಕ್ರಮವನ್ನು ಹಲವರು ಟೀಕಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT