ಅಮರನಾಥ ಯಾತ್ರೆ 
ದೇಶ

ಕಲ್ಲು ತೂರಾಟಗಾರರ ಭೀತಿ: ಅಮರನಾಥ ಯಾತ್ರಿಗಳ ರಕ್ಷಣೆಗೆ 27 ಸಾವಿರ ಭದ್ರತಾ ಸಿಬ್ಬಂದಿಗಾಗಿ ಕೋರಿಕೆ

ಜೂ.29 ರಿಂದ ಅಮರನಾಥ ಯಾತ್ರೆ ಪ್ರಾರಂಭವಾಗಲಿದ್ದು, ಜಮ್ಮು-ಕಾಶ್ಮೀರ ಸರ್ಕಾರ ಯಾತ್ರಿಗಳ ಭದ್ರತೆಗಾಗಿ 27,000 ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದೆ.

ಜಮ್ಮು: ಜೂ.29 ರಿಂದ ಅಮರನಾಥ ಯಾತ್ರೆ ಪ್ರಾರಂಭವಾಗಲಿದ್ದು, ಜಮ್ಮು-ಕಾಶ್ಮೀರ ಸರ್ಕಾರ ಯಾತ್ರಿಗಳ ಭದ್ರತೆಗಾಗಿ 27,000 ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದೆ. 
ಅಮರನಾಥ ಯಾತ್ರೆ ಕೈಗೊಳ್ಳುವ ಭಕ್ತಾದಿಗಳಿಗೆ ಭಯೋತ್ಪಾದಕರಿಂದ ಎದುರಾಗಲಿರವಷ್ಟೇ ಅಪಾಯ ಕಲ್ಲುತೂರಾಟಗಾರರಿಂದಲೂ ಎದುರಾಗುವ ಸಾಧ್ಯತೆ ಇದ್ದು, 27,000 ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಬೇಕೆಂದು ಜಮ್ಮು-ಕಾಶ್ಮೀರ ರಾಜ್ಯ ಸರ್ಕಾರ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಗೃಹ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, ಅಮರನಾಥ ಯಾತ್ರೆ ಶಾಂತಿಯಿಂದ ನಡೆಯಬೇಕಿದ್ದು, 27,000 ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ ಎಂದಿದ್ದಾರೆ. 
ಗೃಹ ಇಲಾಖೆಯ ಕಾರ್ಯದರ್ಶಿ ರಾಜೀವ್ ಮೆಹರಿಶಿ ನೇತೃತ್ವದಲ್ಲಿ ನಡೆದ ಅಮರನಾಥ ಯಾತ್ರೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆ ನಡೆದ ಬಳಿಕ ಗೃಹ ಇಲಾಖೆಯ ಅಧಿಕಾರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು ಅಮರನಾಥ ಯಾತ್ರೆ ಶಾಂತಿಯುತವಾಗಿ ನಡೆಯಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ