ಅಮರನಾಥ ಯಾತ್ರೆ 
ದೇಶ

ಕಲ್ಲು ತೂರಾಟಗಾರರ ಭೀತಿ: ಅಮರನಾಥ ಯಾತ್ರಿಗಳ ರಕ್ಷಣೆಗೆ 27 ಸಾವಿರ ಭದ್ರತಾ ಸಿಬ್ಬಂದಿಗಾಗಿ ಕೋರಿಕೆ

ಜೂ.29 ರಿಂದ ಅಮರನಾಥ ಯಾತ್ರೆ ಪ್ರಾರಂಭವಾಗಲಿದ್ದು, ಜಮ್ಮು-ಕಾಶ್ಮೀರ ಸರ್ಕಾರ ಯಾತ್ರಿಗಳ ಭದ್ರತೆಗಾಗಿ 27,000 ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದೆ.

ಜಮ್ಮು: ಜೂ.29 ರಿಂದ ಅಮರನಾಥ ಯಾತ್ರೆ ಪ್ರಾರಂಭವಾಗಲಿದ್ದು, ಜಮ್ಮು-ಕಾಶ್ಮೀರ ಸರ್ಕಾರ ಯಾತ್ರಿಗಳ ಭದ್ರತೆಗಾಗಿ 27,000 ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದೆ. 
ಅಮರನಾಥ ಯಾತ್ರೆ ಕೈಗೊಳ್ಳುವ ಭಕ್ತಾದಿಗಳಿಗೆ ಭಯೋತ್ಪಾದಕರಿಂದ ಎದುರಾಗಲಿರವಷ್ಟೇ ಅಪಾಯ ಕಲ್ಲುತೂರಾಟಗಾರರಿಂದಲೂ ಎದುರಾಗುವ ಸಾಧ್ಯತೆ ಇದ್ದು, 27,000 ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಬೇಕೆಂದು ಜಮ್ಮು-ಕಾಶ್ಮೀರ ರಾಜ್ಯ ಸರ್ಕಾರ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಗೃಹ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, ಅಮರನಾಥ ಯಾತ್ರೆ ಶಾಂತಿಯಿಂದ ನಡೆಯಬೇಕಿದ್ದು, 27,000 ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ ಎಂದಿದ್ದಾರೆ. 
ಗೃಹ ಇಲಾಖೆಯ ಕಾರ್ಯದರ್ಶಿ ರಾಜೀವ್ ಮೆಹರಿಶಿ ನೇತೃತ್ವದಲ್ಲಿ ನಡೆದ ಅಮರನಾಥ ಯಾತ್ರೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆ ನಡೆದ ಬಳಿಕ ಗೃಹ ಇಲಾಖೆಯ ಅಧಿಕಾರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು ಅಮರನಾಥ ಯಾತ್ರೆ ಶಾಂತಿಯುತವಾಗಿ ನಡೆಯಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT