ಘಟನೆಯಲ್ಲಿ ಹಾನಿಗೊಳಗಾದ ವಾಹನ 
ದೇಶ

ಗಲಭೆಯಿಂದ ಉದ್ವಿಗ್ನಗೊಂಡಿದ್ದ ಸಹರಾನಪುರದಲ್ಲಿ ಪರಿಸ್ಥಿತಿ ಶಾಂತ: ಅಧಿಕಾರಿಗಳು

ದಲಿತ ಮತ್ತು ರಜಪೂತ್ ಸಮುದಾಯದ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದ ಉತ್ತರ ಪ್ರದೇಶದ ಸಹರನಾಪುರದಲ್ಲಿ ಪರಿಸ್ಥಿತಿ ಉದ್ನಿಗ್ನಗೊಂಡಿದೆ, ...

ಲಕ್ನೋ: ದಲಿತ ಮತ್ತು ರಜಪೂತ್ ಸಮುದಾಯದ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದ  ಉತ್ತರ ಪ್ರದೇಶದ ಸಹರನಾಪುರದಲ್ಲಿ ಪರಿಸ್ಥಿತಿ ಉದ್ನಿಗ್ನಗೊಂಡಿದೆ, ಆದರೆ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದು, ಸಿಎಂ ಯೋಗಿ ಆದಿತ್ಯ ನಾಥ್ ಗೃಹ ಇಲಾಖೆ ಕಾರ್ಯದರ್ಶಿ ಮಣಿ ಪ್ರಸಾದ್ ಮಿಶ್ರಾ ನೇತೃತ್ವದ ತಂಡವನ್ನು ಸ್ಥಳಕ್ಕೆ ಕಳುಹಿಸಿದ್ದರು. ಸ್ಥಳಕ್ಕೆ ಭೇಟಿನೀಡಿರುವ ಮಣಿ ಪ್ರಸಾದ್ ಮಿಶ್ರಾ ಅಗತ್ಯ ಭದ್ರತೆ ನಿಯೋಜಿಸಿರುವುದಾಗಿ ಹೇಳಿದ್ದಾರೆ.
ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪ್ರತಿಯೊಂದು ತೀರಾ ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ, ಸಹಜ ಸ್ಥಿತಿಗೆ ಮರಳುವವರೆಗೂ ಅಲ್ಲಿಯೇ ಬಿಡು ಬಿಟ್ಟಿರುವುದಾಗಿ ಮಿಶ್ರಾ ತಿಳಿಸಿದ್ದಾರೆ.
ಗೃಹ ಕಾರ್ಯದರ್ಶಿ ಸೇರಿದಂತೆ ನಾಲ್ಕು ಅಧಿಕಾರಿಗಳನ್ನೊಳಗೊಂಡ ವಿಶೇಷ ತಂಡ ಮಂಗಳವಾರ ರಾತ್ರಿ ವಿಶೇಷ ವಿಮಾನದಲ್ಲಿ  ಗಲಭೆ ಪೀಡಿತ ಪ್ರದೇಶಕ್ಕೆ ಆಗಮಿಸಿದೆ. ಎರಡು ಸಮುದಾಯಗಳ ಘರ್ಷಣೆ ನಂತರ ಅಂದರೆ ಏಪ್ರಿಲ್ 20 ರಿಂದ ಆಗಾಗ್ಗೆ ಹಿಂಸಾಚಾರಗಳು ಸಂಭವಿಸುತ್ತಿವೆ. 1 ತಿಂಗಳ ಸಮಯದಲ್ಲಿ ಮೂರು ಬಾರಿ ಘರ್ಷಣೆಗಳು ಸಂಭವಿಸಿವೆ. 
ಮಂಗಳವಾರ ನಡೆದ ಹಿಂಸಾಚಾರಕ್ಕೆ ಮಾಜಿ ಮುಖ್ಯಮಂತ್ರಿ ಮತ್ತು ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿಯ ಭೇಟಿಯೇ ಕಾರಣವೆಂದು ಉತ್ತರಪ್ರದೇಶ ಸರ್ಕಾರ ಆರೋಪಿಸಿದೆ. ಇದೇ ತಿಂಗಳಲ್ಲಿ ಶಬ್ಬಿರ್‍ಪುರದಲ್ಲಿ ದಲಿತರು ಹಾಕೂ ಠಾಕೂರ್‍ಗಳ ಮಧ್ಯೆ ಘರ್ಷಣೆಯಾಗಿ ದಲಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಮಾಯಾವತಿ ಭೇಟಿ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT