ಎಲ್ ಕೆ ಅಡ್ವಾಣಿ 
ದೇಶ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ, ಇತರರ ವಿರುದ್ಧ ಆರೋಪ ಪಟ್ಟಿ ಸಿದ್ಧಪಡಿಸಲಿರುವ ಸಿಬಿಐ ಕೋರ್ಟ್

1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಬಿಐ ನ ವಿಶೇಷ ನ್ಯಾಯಾಲಯ ಮೇ.25 ರಂದು ಪ್ರಕರಣದ ಆರೋಪಿಗಳಾದ ಅಡ್ವಾಣಿ ಹಾಗೂ ಇತರರ ವಿರುದ್ಧ ಹೆಚ್ಚುವರಿ ಆರೋಪ ಪಟ್ಟಿ..

ಲಖನೌ: 1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಬಿಐ ನ ವಿಶೇಷ ನ್ಯಾಯಾಲಯ ಮೇ.25 ರಂದು ಪ್ರಕರಣದ ಆರೋಪಿಗಳಾದ ಅಡ್ವಾಣಿ ಹಾಗೂ ಇತರರ ವಿರುದ್ಧ ಹೆಚ್ಚುವರಿ ಆರೋಪ ಪಟ್ಟಿ ಸಿದ್ಧಪಡಿಸಲಿದೆ. 
ಮಾಜಿ ಗೃಹ ಸಚಿವ, ಉಪಪ್ರಧಾನಿ ಎಲ್ ಕೆ ಅಡ್ವಾಣಿ ಹಾಗೂ ಇನ್ನಿತರ ನಾಯಕರ ವಿರುದ್ಧದ ಕ್ರಿಮಿನಲ್ ಸಂಚು ಆರೋಪವನ್ನು ಕೈಬಿಡಲು ನಿರಾಕರಿಸಿದ್ದ ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆ ನಡೆಸುವಂತೆ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಆದೇಶ ನೀಡಿತ್ತು. 
ಮೇ.24 ರಂದು ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ನ ವಿಶೇಷ ನ್ಯಾಯಾಲಯ ಆರೋಪಿಗಳಾದ ಶಿವಸೇನೆಯ ಸಂಸದ ಸತೀಶ್ ಪ್ರಧಾನ್ ಗೆ ಜಾಮೀನು ನೀಡಿದೆ. ಮೇ.23 ರಂದೇ ಪ್ರಕರಣದ ವಿಚಾರಣೆ ನಡೆಯಬೇಕಿತ್ತಾದರೂ ಪ್ರಕರಣದ ಓರ್ವ ಆರೋಪಿ ಸತೀಶ್ ಪ್ರಧಾನ್ ಕೋರ್ಟ್ ಗೆ ಹಾಜರಾಗದೇ ಇದ್ದ ಕಾರಣ ಕೋರ್ಟ್ ಮುಂದಿನ ವಿಚಾರಣೆಯನ್ನು ಮೇ.24 ಕ್ಕೆ ನಿಗದಿಪಡಿಸಿತ್ತು. ಮರುದಿನದ ವಿಚಾರಣೆಯಲ್ಲಿ ಆರೋಪಿ ಹಾಜರಾಗಿ ಶರಣಾದ ಕಾರಣ ಗೆ ಜಾಮೀನು ಮಂಜೂರು ಮಾಡಲಾಗಿದೆ. 
ಮೇ.20 ರಂದು ವಿಚಾರಣೆಯನ್ನು ಪ್ರಾರಂಭಿಸಿದ್ದ ವಿಶೇಷ ನ್ಯಾಯಾಲಯ ಪ್ರಕರಣದಲ್ಲಿ ಆರೋಪಿಗಳಾಗಿರುವ 5 ವಿಹೆಚ್ ಪಿ ನಾಯಕರಿಗೆ ಈಗಾಗಲೇ ಜಾಮೀನು ಮಂಜೂರು ಮಾಡಿದೆ. ಇದೀಗ ಎಲ್ ಕೆ ಅಡ್ವಾಣಿ ಸೇರಿದಂತೆ ಇತರ ಪ್ರಮುಖ ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಿದ್ಧಪಡಿಸಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿಸಿಟಿವಿ ನಾಪತ್ತೆ, SOP ನಿರ್ಲಕ್ಷ್ಯ, ಶೌಚಾಲಯದಲ್ಲಿ ಹಣ!: ರಾಮ ಮಂದಿರ ದೇಣಿಗೆ ಕುರಿತು ಎಸ್‌ಐಟಿ ತನಿಖೆಯಲ್ಲಿ 'ವಂಚನೆ'ಯ ಜಾಲ ಬಯಲು!

'ಅವ್ರು ನಿಜವಾದ ರಾಮ ಭಕ್ತರಲ್ಲ: ದೇಣಿಗೆ ವಿವಾದ, ಪ್ರಧಾನಿ ಮೋದಿಯ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್!

Ketan Agarwal Murder case: ಕೇತನ್ ತಲೆ ಜಜ್ಜಿದ್ರಾ ಪಾಪಿಗಳು? ಮೃತದೇಹ ನೋಡಿದ್ರೂ ಶಾಂತವಾಗಿದ್ದ ಸಿಯಾ, ಸಿಬ್ಬಂದಿ ಸ್ಫೋಟಕ ಮಾಹಿತಿ!

'ಲವರ್ ಅಲ್ಲ.. ಬಾಂಬರ್..'; ಕಾರಿನಲ್ಲೇ ಯುವತಿಗೆ ಚಾಕು ಇರಿತ, ಪೆಟ್ರೋಲ್ ಬಾಂಬ್ ಸ್ಫೋಟಿಸಿದ ಭಗ್ನ ಪ್ರೇಮಿ, Video

IPL: ರಜತ್ ಪಾಟಿದಾರ್ ಬಳಿಕ RCB ನಾಯಕ ಯಾರು? ಭಾರೀ ಸುಳಿವು ನೀಡಿದ ಫ್ರಾಂಚೈಸಿ, ಕನ್ನಡಿಗರು ಫುಲ್ ಖುಷ್!