ಎಲ್ ಕೆ ಅಡ್ವಾಣಿ 
ದೇಶ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಅಡ್ವಾಣಿ, ಇತರರ ವಿರುದ್ಧ ಆರೋಪ ಪಟ್ಟಿ ಸಿದ್ಧಪಡಿಸಲಿರುವ ಸಿಬಿಐ ಕೋರ್ಟ್

1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಬಿಐ ನ ವಿಶೇಷ ನ್ಯಾಯಾಲಯ ಮೇ.25 ರಂದು ಪ್ರಕರಣದ ಆರೋಪಿಗಳಾದ ಅಡ್ವಾಣಿ ಹಾಗೂ ಇತರರ ವಿರುದ್ಧ ಹೆಚ್ಚುವರಿ ಆರೋಪ ಪಟ್ಟಿ..

ಲಖನೌ: 1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಿಬಿಐ ನ ವಿಶೇಷ ನ್ಯಾಯಾಲಯ ಮೇ.25 ರಂದು ಪ್ರಕರಣದ ಆರೋಪಿಗಳಾದ ಅಡ್ವಾಣಿ ಹಾಗೂ ಇತರರ ವಿರುದ್ಧ ಹೆಚ್ಚುವರಿ ಆರೋಪ ಪಟ್ಟಿ ಸಿದ್ಧಪಡಿಸಲಿದೆ. 
ಮಾಜಿ ಗೃಹ ಸಚಿವ, ಉಪಪ್ರಧಾನಿ ಎಲ್ ಕೆ ಅಡ್ವಾಣಿ ಹಾಗೂ ಇನ್ನಿತರ ನಾಯಕರ ವಿರುದ್ಧದ ಕ್ರಿಮಿನಲ್ ಸಂಚು ಆರೋಪವನ್ನು ಕೈಬಿಡಲು ನಿರಾಕರಿಸಿದ್ದ ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆ ನಡೆಸುವಂತೆ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಆದೇಶ ನೀಡಿತ್ತು. 
ಮೇ.24 ರಂದು ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ನ ವಿಶೇಷ ನ್ಯಾಯಾಲಯ ಆರೋಪಿಗಳಾದ ಶಿವಸೇನೆಯ ಸಂಸದ ಸತೀಶ್ ಪ್ರಧಾನ್ ಗೆ ಜಾಮೀನು ನೀಡಿದೆ. ಮೇ.23 ರಂದೇ ಪ್ರಕರಣದ ವಿಚಾರಣೆ ನಡೆಯಬೇಕಿತ್ತಾದರೂ ಪ್ರಕರಣದ ಓರ್ವ ಆರೋಪಿ ಸತೀಶ್ ಪ್ರಧಾನ್ ಕೋರ್ಟ್ ಗೆ ಹಾಜರಾಗದೇ ಇದ್ದ ಕಾರಣ ಕೋರ್ಟ್ ಮುಂದಿನ ವಿಚಾರಣೆಯನ್ನು ಮೇ.24 ಕ್ಕೆ ನಿಗದಿಪಡಿಸಿತ್ತು. ಮರುದಿನದ ವಿಚಾರಣೆಯಲ್ಲಿ ಆರೋಪಿ ಹಾಜರಾಗಿ ಶರಣಾದ ಕಾರಣ ಗೆ ಜಾಮೀನು ಮಂಜೂರು ಮಾಡಲಾಗಿದೆ. 
ಮೇ.20 ರಂದು ವಿಚಾರಣೆಯನ್ನು ಪ್ರಾರಂಭಿಸಿದ್ದ ವಿಶೇಷ ನ್ಯಾಯಾಲಯ ಪ್ರಕರಣದಲ್ಲಿ ಆರೋಪಿಗಳಾಗಿರುವ 5 ವಿಹೆಚ್ ಪಿ ನಾಯಕರಿಗೆ ಈಗಾಗಲೇ ಜಾಮೀನು ಮಂಜೂರು ಮಾಡಿದೆ. ಇದೀಗ ಎಲ್ ಕೆ ಅಡ್ವಾಣಿ ಸೇರಿದಂತೆ ಇತರ ಪ್ರಮುಖ ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಿದ್ಧಪಡಿಸಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಧಾನಸೌಧದಲ್ಲಿ 'ಫ್ರೀಡಂ ಹಬ್ಬ: ಈ ಮೂರು ನಿಲ್ದಾಣದಲ್ಲಿ ಮೆಟ್ರೋ ನಿಲುಗಡೆ ಇಲ್ಲ!

ತಂದೆ ಎಲ್ಲಿದ್ದಾರೆ ಅಂತ ತಾಯಿನ ಕೇಳಿ; ವಿಧಾನಸಭೆಯಲ್ಲಿ ಹುಡುಕಬೇಡಿ; CM Vijay ಬಗ್ಗೆ ಬಿಜೆಪಿ ಅಧ್ಯಕ್ಷರ ಹೇಳಿಕೆ ವಿವಾದಕ್ಕೆ ಗುರಿ!

‘ರಜಾಕರ್‌ಗಳಿಂದ ನಮ್ಮನ್ನು ರಕ್ಷಿಸಿದ್ದು RSS ಅಲ್ಲ, ಭಾರತೀಯ ಸೇನೆ’: BL ಸಂತೋಷ್ ಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು!

ಯುರೋಪ್‌ನಲ್ಲಿ ತೀವ್ರಗೊಂಡ Heatwave; ಒಂದೆ ವಾರದಲ್ಲಿ 16,000 ಸಾವು!

Hockey World Cup 2026: ಸ್ವಾತಂತ್ರ್ಯ ದಿನಾಚರಣೆಯಂದೇ ಭಾರತ ಶುಭಾರಂಭ, ವೇಲ್ಸ್ ವಿರುದ್ಧ 3-1 ಅಂತರದ ಭರ್ಜರಿ ಜಯ