ತೆಲಂಗಾಣ ರಾಜ್ಯ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ 
ದೇಶ

ಕೇಂದ್ರದಿಂದ ನೆರವು ಹೇಳಿಕೆ: ಅಮಿತ್ ಶಾ ಕ್ಷಮೆಯಾಚಿಸುವಂತೆ ತೆಲಂಗಾಣ ಸಿಎಂ ಆಗ್ರಹ

ತೆಲಂಗಾಣ ರಾಜ್ಯಕ್ಕೆ ಕೇಂದ್ರ ಪ್ರತೀ ವರ್ಷ ಹೆಚ್ಚುವರಿಯಾಗಿ ರೂ. 1 ಲಕ್ಷ ಕೋಟಿ ನೆರವು ನೀಡುತ್ತಿದೆ ಎಂಬ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಹೇಳಿಕೆಗೆ ತೆಲಂಗಾಣ ರಾಜ್ಯ ಮುಖ್ಯಮಂತ್ರಿ ಕೆ.ಚಂದ್ರಶೇಖರ್...

ಹೈದರಾಬಾದ್: ತೆಲಂಗಾಣ ರಾಜ್ಯಕ್ಕೆ ಕೇಂದ್ರ ಪ್ರತೀ ವರ್ಷ ಹೆಚ್ಚುವರಿಯಾಗಿ ರೂ. 1 ಲಕ್ಷ ಕೋಟಿ ನೆರವು ನೀಡುತ್ತಿದೆ ಎಂಬ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಹೇಳಿಕೆಗೆ ತೆಲಂಗಾಣ ರಾಜ್ಯ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ತೀವ್ರವಾಗಿ ಕೆಂಡ ಕಾರಿದ್ದು, ಹೇಳಿಕೆ ಕುರಿತಂತೆ ಕೂಡಲೇ ಕ್ಷಮೆಯಾಚಿಸುವಂತೆ ಗುರುವಾರ ಆಗ್ರಹಿಸಿದ್ದಾರೆ. 
ಅಮಿತ್ ಶಾ ಅವರ ಹೇಳಿಕೆ ಕುರಿತಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿರುವ ಅವರು, ಅಮಿತ್ ಶಾ ಅವರ ಹೇಳಿಕೆ ಶುದ್ಧ ಸುಳ್ಳು. ತೆಲಂಗಾಣ ರಾಜ್ಯದಿಂದ ಹೊರಗೆ ಹೋಗುವುದಕ್ಕೂ ಮುನ್ನ ಅಮಿತ್ ಶಾ ಅವರು ಬೇಷರತ್ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. 
ಮೂರು ದಿನಗಳಿಂದಲೂ ತೆಲಂಗಾಣ ಸರ್ಕಾರದ ವಿರುದ್ಧ ಅಮಿತ್ ಶಾ ಮಾತನಾಡುತ್ತಿರುವುದನ್ನು ನೋಡುತ್ತಿದ್ದೇನೆ. ಮೋದಿಯವರ ಬಗ್ಗೆ ನನಗೆ ಅಪಾರ ಗೌರವವಿದೆ. ಕಳೆದ ಮೂರು ವರ್ಷಗಳಿಂದ ಯಾವೊಂದು ಸಣ್ಣ ಹಗರಣಗಳೂ ಕೂಡ ನಡೆದಿಲ್ಲ. ಆದರಹೆ, ಅಮಿತ್ ಶಾ ಅವರ ಹೇಳಿಕೆ ನನಗೆ ಬೇಸರವನ್ನು ತಂದಿದೆ. ಈ ರೀತಿಯ ಹೇಳಿಕೆಗಳನ್ನು ನೀಡುವುದರಿಂದ ಅಮಿತ್ ಶಾ ಅವರ ಘನತೆ ಹಾಗೂ ಖ್ಯಾತಿ ಹೆಚ್ಚಾಗುವುದಿಲ್ಲ. 
ತಾಳ್ಮೆ ಹಾಗೂ ಸಹನೆಗೂ ಮಿತಿ ಎಂಬುದಿರುತ್ತದೆ. ಶಾ ಅವರು ಇದೇ ರೀತಿಯ ಸುಳ್ಳುಗಳನ್ನು ಹೇಳುತ್ತಿದ್ದರೆ, ನಾವು ಸುಮ್ಮನೆ ಇರುವುದಿಲ್ಲ.ಕೇಂದ್ರ ನೀಡುತ್ತಿರುವ ನೆರವು ಕುರಿತಂತೆ ಈಗಾಗಲೇ ನಾವು ಪಟ್ಟಿ ತಯಾರಿಸಿದ್ದೇವೆ. ಕೇಂದ್ರ ಸರ್ಕಾರ ನೆರವು ನೀಡುತ್ತಿರುವುದನ್ನು ಬಿಜೆಪಿ ಸಾಬೀತುಪಡಿಸಲು. ನಂತರ ನಾನು ನನ್ನ ಸ್ಥಾನಕ್ಕೆ ರಾಜಿನಾಮೆಯನ್ನು ಸಲ್ಲಿಸುತ್ತೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT