ಅಮಿತ್ ಶಾ 
ದೇಶ

ಕಾಶ್ಮೀರದಲ್ಲಿನ ಅನಿಶ್ಚಿತತೆ ಸದ್ಯದಲ್ಲಿಯೇ ಕೊನೆಯಾಗಲಿದೆ: ಅಮಿತ್ ಶಾ

ಕಾಶ್ಮೀರ ಕಣಿವೆಯಲ್ಲಿ ಇರುವ ಅನಿಶ್ಚಿತತೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸದ್ಯದಲ್ಲಿಯೇ...

ನವದೆಹಲಿ: ಕಾಶ್ಮೀರ ಕಣಿವೆಯಲ್ಲಿ ಇರುವ ಅನಿಶ್ಚಿತತೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸದ್ಯದಲ್ಲಿಯೇ ನಿಯಂತ್ರಣಕ್ಕೆ ತರಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮೂರು ವರ್ಷಗಳ ಆಡಳಿತಾವಧಿಯನ್ನು ಪೂರೈಸಿದ ಹಿನ್ನೆಲೆಯಲ್ಲಿ ಮೇಕಿಂಗ್ ಆಫ್ ಡೆವೆಲಪ್ ಡ್ ಇಂಡಿಯಾ(M.O.D.I. (Making of Developed India)ದ ಮೊದಲ ದಿನದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಕಾಶ್ಮೀರ ಹಿಂಸಾಚಾರವನ್ನು ನಿಯಂತ್ರಣಕ್ಕೆ ತರುವಲ್ಲಿ ಮೋದಿ ಮತ್ತು ಕಾಶ್ಮೀರ ಸರ್ಕಾರ ಏಕೆ ವಿಫಲರಾಗಿದ್ದಾರೆ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಎರಡು ಮೂರು ತಿಂಗಳುಗಳ ಅಭಿವೃದ್ಧಿಯಿಂದ ಸರ್ಕಾರದ ಯಶಸ್ಸು ಮತ್ತು ವೈಫಲ್ಯವನ್ನು ಅಳೆಯಲು  ಸಾಧ್ಯವಿಲ್ಲ ಎಂದು ಅವರು ಹೇಳಿದರು.
1989ರಲ್ಲಿ ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದನೆ ಆರಂಭಗೊಂಡ ನಂತರ ಅಲ್ಲಿ 3ರಿಂದ 6 ತಿಂಗಳು ಹಿಂಸಾಚಾರ ಇರುವ ವಾತಾವರಣ ಕಾಣುತ್ತೇವೆ. ಕಾಶ್ಮೀರ ಹಿಂಸೆಯನ್ನು ಮೋದಿ ನೇತೃತ್ವದ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು ಅದನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?