ನರೇಂದ್ರ ಮೋದಿ ಮತ್ತು ನಿತೀಶ್ ಕುಮಾರ್ 
ದೇಶ

ಸೋನಿಯಾ ಗಾಂಧಿ ಭೋಜನ ಕೂಟಕ್ಕೆ ಗೈರು: ಪ್ರಧಾನಿಯೊಂದಿಗೆ ನಿತೀಶ್ ಕುಮಾರ್ ಲಂಚ್!

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶುಕ್ರವಾರ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಏರ್ಪಡಿಸಿದ್ದ ಭೋಜನಕೂಟಕ್ಕೆ ಗೈರಾಗಿದ್ದರು, ಆದರೆ ಇಂದು ಪ್ರಧಾನಿ ...

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶುಕ್ರವಾರ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಏರ್ಪಡಿಸಿದ್ದ ಭೋಜನಕೂಟಕ್ಕೆ ಗೈರಾಗಿದ್ದರು, ಆದರೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಧ್ಯಾಹ್ನದ ಊಟಕ್ಕೆ ಹಾದರಾಗಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.
ಭೋಜನದ ನಂತರ ನಿತೀಶ್ ಕುಮಾರ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸಮಾಲೋಚನೆ ಮಾಡಿದ್ದಾರೆ. ಬಿಹಾರ ಸಿಎಂ ನಿತೀಶ್ ಕುಮಾರ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು ಮಧ್ಯಾಹ್ನ ಭೇಟಿಯಾಗಿದ್ದಾರೆ ಎಂದು ಪ್ರಧಾನಿ ಮಂತ್ರಿಗಳ ಕಚೇರಿ ಟ್ವೀಟ್ ಮಾಡಿದೆ.
ಶುಕ್ರವಾರ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ 17 ವಿರೋಧಪಕ್ಷಗಳ ಮುಖಂಡರಿಗೆ ಭೋಜನಕೂಟ ಏರ್ಪಡಿಸಿದ್ದರು. ಈ ಸಭೆಗೆ ನಿತೀಶ್ ಕುಮಾರ್ ಜೆಡಿಯು ಉಪಾಧ್ಯಕ್ಷ ಶರದ್ ಯಾದವ್ ರನ್ನು ತಮ್ಮ ಪ್ರತಿನಿಧಿಯನ್ನಾಗಿ ಕಳುಹಿಸಿದ್ದರು. ಮುಂಬರುವ ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಸೋನಿಯಾ ಈ ಭೋಜನಕೂಟ ಏರ್ಪಡಿಸಿದ್ದರು.
ನಾನು ಈಗಾಗಲೇ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿದ್ದೇನೆ, ದೂರವಾಣಿಯಲ್ಲಿ ಮಾತನಾಡಿದ್ದೇನೆ ಪ್ರದಾನಿ ಅವರ ಭೋಜನ ಕೂಟಕ್ಕೆ ಹಾಜರಾಗಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ನಿತೀಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT