ಮನೇಕಾ ಗಾಂಧಿ 
ದೇಶ

ಹೊಸ ಕಾನೂನು ಹಸುಗಳನ್ನು ರಕ್ಷಿಸುತ್ತದೆ: ಮನೇಕಾ ಗಾಂಧಿ ಭರವಸೆ

ದೇಶಾದ್ಯಂತ ಗೋಹತ್ಯೆ ನಿಷೇಧಿಸಿರುವ ಕೇಂದ್ರ ಸರ್ಕಾರ, ದನ ಕರುಗಳನ್ನು ಮಾರಾಟ ಮಾಡಲು ಮತ್ತು ಖರೀದಿಸಿಲು ರೈತರಿಗೆ ಮಾತ್ರ ಅವಕಾಶ ಕಲ್ಪಿಸಿ ಜಾರಿಗೆ ..

ನವದೆಹಲಿ: ದೇಶಾದ್ಯಂತ ಗೋಹತ್ಯೆ ನಿಷೇಧಿಸಿರುವ ಕೇಂದ್ರ ಸರ್ಕಾರ, ದನ ಕರುಗಳನ್ನು ಮಾರಾಟ ಮಾಡಲು ಮತ್ತು ಖರೀದಿಸಿಲು ರೈತರಿಗೆ ಮಾತ್ರ ಅವಕಾಶ ಕಲ್ಪಿಸಿ ಜಾರಿಗೆ ತಂದಿರುವ ಹೊಸ ಕಾನೂನು ಹಸುಗಳನ್ನು ಕೆಟ್ಟದಾಗಿ ನೋಡಿಕೊಳ್ಳುವುದಿಲ್ಲ ಎಂದು ಸಚಿವೆ ಮನೇಕಾ ಗಾಂಧಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಪ್ರಾಣಿ ಹಕ್ಕುಗಳ ಕಾರ್ಯಕರ್ತೆಯಾಗಿರುವ ಮನೇಕಾ ಗಾಂಧಿ ಈ ಹಿಂದೆ ದೇಶದಲ್ಲಿರುವ ಎಲ್ಲಾ ಮೃಗಾಲಯಗಳನ್ನು ಮುಚ್ಚಬೇಕು ಹಾಗೂ ಗೋಹತ್ಯೆ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದರು.
8 ರಿಂದ 9 ಹಸುಗಳನ್ನು ಸಾಗಿಸುವ ವಾಹನದಲ್ಲಿ 80 ಹಸುಗಳನ್ನು ತುಂಬಿ  ಮಾರುಕಟ್ಟೆಗೆ ಸಾಗಿಸಿ ಕಸಾಯಿಖಾನೆಗಳಿಗೆ ಮಾರಾಟ ಮಾಡುತ್ತಾರೆ, ಜೊತೆಗೆ ರೈತರು ಅನಾರೋಗ್ಯ ಪೀಡಿತ ಹಸುಗಳನ್ನು ಈ ಮಾರುಕಟ್ಟೆಯಲ್ಲಿ  ತಂದು ಮಾರಾಟ ಮಾಡುತ್ತಾರೆ. ಆದರೆ ಹೊಸ ನಿಯಮ ಇಂಥ ಕ್ರೂರ ಆಚರಣೆಯನ್ನು ತಡೆಗಟ್ಟುತ್ತದೆ ಎಂದು ಅವರು ಭರವಸೆ ವ್ಯಕ್ತ ಪಡಿಸಿದ್ದಾರೆ.
ಪ್ರಾಣಿಗಳ ವ್ಯಾಪಾರಕ್ಕೆ ಹೊರಡಿಸಿರುವ ಹೊಸ ಆದೇಶದನ್ವಯ ಗೋವುಗಳನ್ನು ಭೂಮಾಲೀಕರಿಗೆ ಮಾತ್ರ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ದಾಖಲೆಗಳ ಸಮೇತ ತಾನು ಕೃಷಿಕ ಎಂಬುದನ್ನು ಸಾಬೀತುಪಡಿಸುವ ವ್ಯಕ್ತಿಗಳಿಗೆ ಮಾತ್ರ ಜಾನುವಾರುಗಳನ್ನು ಮಾರಾಟ ಮಾಡಬಹುದಾಗಿದೆ.
ಗೋವುಗಳನ್ನು ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಮಾತ್ರ ಬಳಸಿಕೊಳ್ಳಬೇಕು, ಕಸಾಯಿಖಾನೆಗೆ ಮಾರಾಟ ಮಾಡುವುದಕ್ಕಲ್ಲ ಎಂದು 1960ರ ಪ್ರಾಣಿಗಳ ಹಿಂಸಾಚಾರ ತಡೆ ಕಾಯ್ದೆಯ ವಿಶೇಷ ವಿಧಿಯಲ್ಲಿ ಸ್ಪಷ್ಟಪಡಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT