ಕೇರಳ ರಾಜ್ಯ ಮುಖ್ಯಮಂತ್ರಿ ಪಿಣರಾಯಿ ವಿಜಯನ್ 
ದೇಶ

ಕೇರಳದಲ್ಲಿ ಗೋಮಾಂಸ ಉತ್ಸವ: ಪ್ರಧಾನಿ ಮೋದಿಗೆ ಪತ್ರ ಬರೆದ ಪಿಣರಾಯಿ ವಿಜಯನ್

ಜಾನುವಾರು ಮಾರುಕಟ್ಟೆಗಳಲ್ಲಿ ಹತ್ಯೆಯ ಉದ್ದೇಶಕ್ಕೆ ಪಶುಗಳನ್ನು ಮಾರಬಾರದು ಎಂದು ಕೇಂದ್ರ ಸರ್ಕಾರ ಹೊರಡಿಸಿರುವ ಹೊಸ ಆದೇಶದ ವಿರುದ್ದ ಪ್ರತಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದು...

ನವದೆಹಲಿ: ಜಾನುವಾರು ಮಾರುಕಟ್ಟೆಗಳಲ್ಲಿ ಹತ್ಯೆಯ ಉದ್ದೇಶಕ್ಕೆ ಪಶುಗಳನ್ನು ಮಾರಬಾರದು ಎಂದು ಕೇಂದ್ರ ಸರ್ಕಾರ ಹೊರಡಿಸಿರುವ ಹೊಸ ಆದೇಶದ ವಿರುದ್ದ ಪ್ರತಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಗೋಮಾಂಸವನ್ನು ಭಾರೀ ಪ್ರಮಾಣದಲ್ಲಿ ಬಳಸುವ ಕೇರಳ ರಾಜ್ಯದಲ್ಲಿ ಭಾರೀ ವಿರೋಧಗಳು ವ್ಯಕ್ತವಾಗುತ್ತಿವೆ. 
ಗೋಹತ್ಯೆಗೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿರುವ ಹಿನ್ನಲೆ ಕೇರಳ ರಾಜ್ಯದ ಹಲವೆಡೆ ನಿನ್ನೆಯಷ್ಟೇ ಯುವ ಕಾಂಗ್ರೆಸ್ ಹಾಗೂ ಎಡರಂಗದ ಕಾರ್ಯಕರ್ತರು ಗೋಮಾಂಸ ಉತ್ಸವವನ್ನು ಆಚರಿಸಿದ್ದಾರೆ. 
ಕಣ್ಣೂರಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸಾರ್ವಜನಿಕವಾಗಿಯೇ ಗೋವುಗಳನ್ನು ಹತ್ಯೆ ಮಾಡಿ ಕೇಂದ್ರದ ವಿರದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಈ ಹಿನ್ನಲೆಯಲ್ಲಿ ಕೇರಳ ರಾಜ್ಯ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದು, ಪತ್ರಕ್ಕೆ ಬರುವ ಉತ್ತರ ಆಧರಿಸಿ ಹೊಸ ನಿಯಮಗಳನ್ನು ಜಾರಿಗೆ ತರಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ. 
ಗೋಹತ್ಯೆ ಮೇಲಿನ ನಿರ್ಬಂಧದಿಂದ ಲಕ್ಷಾಂತರ ಭಾರತೀಯರ ಜೀವನದ ಮೇಲೆ ಹೊಡೆತ ಬೀಳಲಿದೆ. ಅಲ್ಲದೆ, ಈ ರೀತಿಯ ನಿರ್ಧಾರ ನಮ್ಮ ಸಂವಿಧಾನದ ಮೂಲಭೂತ ಹಕ್ಕುಗಳನ್ನು ಉಲ್ಲಂಘನೆ ಮಾಡಿದಂತಾಗುತ್ತದೆ. ಕಠಿಣ ನಿರ್ಧಾರದಿಂದ ದಲಿತರು, ರೈತರಿಗೂ ಹೊಡೆತ ಬೀಳಲಿದೆ ಎಂದು ಪಿಣರಾಯಿ ಕಿಡಿಕಾರಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ