ಪ್ರಧಾನಮಂತ್ರಿ ನರೇಂದ್ರ ಮೋದಿ
ರಾಯ್'ಪುರ (ಛತ್ತೀಸ್ಗಢ): ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತದ 2ನೇ ಮಹಾತ್ಮಗಾಂಧಿ ಎಂದು ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯೆಲ್ ಅವರು ಶನಿವಾರ ಹೇಳಿದ್ದಾರೆ.
ಛತ್ತೀಸ್ಗಢದ ರಾಯ್'ಪುರದಲ್ಲಿ ನಿನ್ನೆ ನಡೆದ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಪ್ರಧಾನಿ ಮೋದಿಯವರ ಕಾರ್ಯಕ್ಷಮತೆಗೆ ಮೆಚ್ಚಿರುವ ರಾಷ್ಟ್ರಪತಿ ಮೋದಿ ಅವರನ್ನು ಮಾಜಿ ಪ್ರಧಾನಿಗಳಾದ ನೆಹರೂ ಮತ್ತು ಇಂದಿರಾಗಾಂಧಿ ಜೊತೆಗೆ ಹೋಲಿಕೆ ಮಾಡಿದ್ದಾರೆ. ಆದರೆ, ಮೋದಿಯವರು ಭಾರತದ ಎರಡನೇ ಮಹಾತ್ಮ ಗಾಂಧಿ ಎಂದು ಹೇಳಲು ಇಚ್ಛಿಸುತ್ತೇನೆಂದು ಹೇಳಿದ್ದಾರೆ.
ದೇಶದಲ್ಲಿರುವ ತಾಂಡವಾಡುತ್ತಿದ್ದ ಭ್ರಷ್ಟಾಚಾರ ಮತ್ತು ಯುಪಿಎ ಸರ್ಕಾರ ಹಗರಣಗಳಿಂದ ಬೇಸತ್ತು ಹೋಗಿದ್ದ ಜನತೆ ಗುಜರಾತ್ ನಿಂದ ಮೋದಿಯವರನ್ನು ಕರೆದರು.
ಮೋದಿ ಸರ್ಕಾರ ಆಡಳಿತ ನಡೆಸುವುದಕ್ಕೂ ಮುನ್ನ ದೇಶದಲ್ಲಿ ಭ್ರಷ್ಟಾಚಾರ, ಬೆಲೆ ಏರಿಕೆ, ಹಗರಣಗಳು ಹಾಗೂ ಇನ್ನಿತರೆ ಸಮಸ್ಯೆಗಳು ತಾಂಡವವಾಡುತ್ತಿತ್ತು. ಪ್ರಧಾನಮಂತ್ರಿಗಳೂ ಕೂಡ ಸೂಕ್ತ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ಬೇಸತ್ತಿ ಹೋಗಿದ್ದ ಜನರು ಗುಜರಾತ್ ನಲ್ಲಿರುವ ಸಂತ (ಮೋದಿ)ನನ್ನು ಕರೆದರು. ಮೂರುವ ವರ್ಷದಲ್ಲಿ ಪ್ರಧಾನಿ ಮೋದಿಯವರು ದೇಶವನ್ನು ಉನ್ನತ ಸ್ಥಾನದತ್ತ ಕೊಂಡೊಯ್ದಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಯಾವುದೇ ಪ್ರಧಾನಿಗಳು ಮಾಡದ ಕೆಲಸವನ್ನು ಮೋದಿ ಮಾಡಿದ್ದಾರೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos