ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ಪ್ರಧಾನಿ ಮೋದಿ ಭಾರತದ 2ನೇ ಮಹಾತ್ಮ ಗಾಂಧಿ: ಕೇಂದ್ರ ಸಚಿವ ಗೋಯಲ್!

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತದ 2ನೇ ಮಹಾತ್ಮಗಾಂಧಿ ಎಂದು ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯೆಲ್ ಅವರು ಶನಿವಾರ ಹೇಳಿದ್ದಾರೆ...

ರಾಯ್'ಪುರ (ಛತ್ತೀಸ್ಗಢ): ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತದ 2ನೇ ಮಹಾತ್ಮಗಾಂಧಿ ಎಂದು ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯೆಲ್ ಅವರು ಶನಿವಾರ ಹೇಳಿದ್ದಾರೆ. 
ಛತ್ತೀಸ್ಗಢದ ರಾಯ್'ಪುರದಲ್ಲಿ ನಿನ್ನೆ ನಡೆದ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಪ್ರಧಾನಿ ಮೋದಿಯವರ ಕಾರ್ಯಕ್ಷಮತೆಗೆ ಮೆಚ್ಚಿರುವ ರಾಷ್ಟ್ರಪತಿ ಮೋದಿ ಅವರನ್ನು ಮಾಜಿ ಪ್ರಧಾನಿಗಳಾದ ನೆಹರೂ ಮತ್ತು ಇಂದಿರಾಗಾಂಧಿ ಜೊತೆಗೆ ಹೋಲಿಕೆ ಮಾಡಿದ್ದಾರೆ. ಆದರೆ, ಮೋದಿಯವರು ಭಾರತದ ಎರಡನೇ ಮಹಾತ್ಮ ಗಾಂಧಿ ಎಂದು ಹೇಳಲು ಇಚ್ಛಿಸುತ್ತೇನೆಂದು ಹೇಳಿದ್ದಾರೆ. 
ದೇಶದಲ್ಲಿರುವ ತಾಂಡವಾಡುತ್ತಿದ್ದ ಭ್ರಷ್ಟಾಚಾರ ಮತ್ತು ಯುಪಿಎ ಸರ್ಕಾರ ಹಗರಣಗಳಿಂದ ಬೇಸತ್ತು ಹೋಗಿದ್ದ ಜನತೆ ಗುಜರಾತ್ ನಿಂದ ಮೋದಿಯವರನ್ನು ಕರೆದರು. 
ಮೋದಿ ಸರ್ಕಾರ ಆಡಳಿತ ನಡೆಸುವುದಕ್ಕೂ ಮುನ್ನ ದೇಶದಲ್ಲಿ ಭ್ರಷ್ಟಾಚಾರ, ಬೆಲೆ ಏರಿಕೆ, ಹಗರಣಗಳು ಹಾಗೂ ಇನ್ನಿತರೆ ಸಮಸ್ಯೆಗಳು ತಾಂಡವವಾಡುತ್ತಿತ್ತು. ಪ್ರಧಾನಮಂತ್ರಿಗಳೂ ಕೂಡ ಸೂಕ್ತ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ಬೇಸತ್ತಿ ಹೋಗಿದ್ದ ಜನರು ಗುಜರಾತ್ ನಲ್ಲಿರುವ ಸಂತ (ಮೋದಿ)ನನ್ನು ಕರೆದರು. ಮೂರುವ ವರ್ಷದಲ್ಲಿ ಪ್ರಧಾನಿ ಮೋದಿಯವರು ದೇಶವನ್ನು ಉನ್ನತ ಸ್ಥಾನದತ್ತ ಕೊಂಡೊಯ್ದಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಯಾವುದೇ ಪ್ರಧಾನಿಗಳು ಮಾಡದ ಕೆಲಸವನ್ನು ಮೋದಿ ಮಾಡಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT