ಸುಬ್ರಹ್ಮಣಿಯನ್ ಸ್ವಾಮಿ 
ದೇಶ

ಕಣ್ಣೂರು ಹಿಂಸಾಚಾರ ತಡೆಗೆ ಆರ್ಟಿಕಲ್ 247 ಜಾರಿಗೊಳಿಸಿ: ಸ್ವಾಮಿ ಸಲಹೆ

ಕೇರಳದ ಕಣ್ಣೂರಿನಲ್ಲಿ ಆರ್ ಎಸ್ಎಸ್ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಂವಿಧಾನದ ಆರ್ಟಿಕಲ್ 247 ನ್ನು ಜಾರಿಗೊಳಿಸಬೇಕು ಎಂದು ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ.

ಕೊಚ್ಚಿ: ಕೇರಳದ ಕಣ್ಣೂರಿನಲ್ಲಿ ಆರ್ ಎಸ್ಎಸ್ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಂವಿಧಾನದ ಆರ್ಟಿಕಲ್ 247 ನ್ನು ಜಾರಿಗೊಳಿಸಬೇಕು ಎಂದು ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ. 
ಕೊಚ್ಚಿಯಲ್ಲಿ ಬಿಜೆಪಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಸುಬ್ರಹ್ಮಣಿಯನ್ ಸ್ವಾಮಿ, ಕಣ್ಣೂರಿನಲ್ಲಿ ಪೊಲೀಸರು ಹಾಗೂ ಜಿಲ್ಲಾ ಅಧಿಕಾರಿಗಳು ತಮ್ಮ ಕೆಲಸವನ್ನು ಸರಿಯಾಗಿ ನಿರ್ವಹಣೆ ಮಾಡದೇ ಇದ್ದಲ್ಲಿ ಪರ್ಯಾಯ ಮಾರ್ಗ ಅನುಸರಿಸುವ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ ಎಂದು ಸ್ವಾಮಿ ಹೇಳಿದ್ದಾರೆ. 
ಕಣ್ಣೂರಿನಲ್ಲಿ ಹೆಚ್ಚುತ್ತಿರುವ ಹಲ್ಲೆ, ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಸಂವಿಧಾನದ ಆರ್ಟಿಕಲ್ 247 ನ್ನು ಜಾರಿಗೊಳಿಸುವುದು ಉತ್ತಮ ಆಯ್ಕೆ ಎಂದು ಸುಬ್ರಹ್ಮಣಿಯನ್ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಆರ್ಟಿಕಲ್ 247 ನ್ನು ಜಾರಿಗೊಳಿಸುವುದರಿಂದ ಜಿಲ್ಲಾವಾರು ಮಟ್ಟದಲ್ಲಿ ಮ್ಯಾಜಿಸ್ಟ್ರೇಟ್ ನ್ನು ನೇಮಕ ಮಾಡಲು ಸಂಸತ್ ಗೆ ಅಧಿಕಾರವಿರುತ್ತದೆ. ಸಂಸತ್ ನಿಂದ ನಿಯೋಜನೆಗೊಂಡಿರುವ ಮ್ಯಾಜಿಸ್ಟ್ರೇಟ್ ಗೆ ಯಾವುದೇ ಆದೇಶ ಹಾಗೂ ವಾರೆಂಟ್ ಜಾರಿ ಮಾಡುವುದಕ್ಕೆ ಪರಮಾಧಿಕಾರ ಇರಲಿದ್ದು  ಕಣ್ಣೂರಿನಲ್ಲಿ ಆರ್ ಎಸ್ಎಸ್ ಕಾರ್ಯಕರ್ತರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಆರ್ಟಿಕಲ್ 247 ನ್ನು ಜಾರಿಗೊಳಿಸಿ ಕೇಂದ್ರ ಸರ್ಕಾರವೇ ಮ್ಯಾಜಿಸ್ಟ್ರೇಟ್ ನ್ನು ನೇಮಕ ಮಾಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ. 
ಇದೇ ವೇಳೇ ಸೇನಾ ಪಡೆಗೆ ವಿಶೇಷ ಅಧಿಕಾರ ನೀಡಿ ಕೇರಳಕ್ಕೆ ಕೆಳಿಸುವ ಪ್ರಸ್ತಾವನೆಯನ್ನು ವಿರೋಧಿಸಿ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಬಾಲಕೃಷ್ಣನ್ ನೀಡಿರುವ ಹೇಳಿಕೆಗೂ ಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಎಎಫ್ಎಸ್ ಪಿಎ ನ್ನು ಜಾರಿಗೊಳಿಸಿ ಸೇನೆ ಕಳಿಸುವುದೂ ಸಾಧ್ಯವಿದೆ ಎಂದು ಹೇಳಿದ್ದಾರೆ. 
ಕೇರಳದಲ್ಲಿ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟುವುದಕ್ಕೆ ಸೇನೆಯನ್ನು ಕಳಿಸುವುದನ್ನು ವಿರೋಧಿಸಿದ್ದ ಬಾಲಕೃಷ್ಣನ್, ಕೇರಳದಲ್ಲಿ ಸೇನಾಪಡೆಗೆ ವಿಶೇಷಾಧಿಕಾರ ನೀಡಿದರೆ ಸೇನಾ ಸಿಬ್ಬಂದಿಗಳು ಅಲ್ಪಸಂಖ್ಯಾತ ಮಹಿಳೆಯರ ಮೇಲೆ ದೌರ್ಜನ್ಯ ಎಸಗುತ್ತಾರೆ ಎಂದು ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT