ಸಂಗ್ರಹ ಚಿತ್ರ 
ದೇಶ

ಸುಖೋಯ್ -30 ವಿಮಾನ ಅವಶೇಷ ಪತ್ತೆ: ಸಿಬ್ಬಂದಿಗಾಗಿ ಮುಂದುವರಿದ ಶೋಧ ಕಾರ್ಯ

ಸುಖೊಯ್-30 ಯುದ್ಧ ವಿಮಾನದ ಕಾಣೆಯಾದ ಸಿಬ್ಬಂದಿಗಾಗಿ ಶೋಧ...

ಇಟಾನಗರ್(ಅರುಣಾಚಲ ಪ್ರದೇಶ): ಸುಖೊಯ್-30 ಯುದ್ಧ ವಿಮಾನದ ಕಾಣೆಯಾದ ಸಿಬ್ಬಂದಿಗಾಗಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ ಎಂದು ಅರುಣಾಚಲ ಪ್ರದೇಶ ಗೃಹ ಸಂಸದೀಯ ಕಾರ್ಯದರ್ಶಿ ಪಣಿ ರಾಮನ್ ತಿಳಿಸಿದ್ದಾರೆ.
ದಿನನಿತ್ಯದ ತರಬೇತಿ ಹಾರಾಟ ನಡೆಸಿದ್ದ ಸುಕೊಯ್-30 ಎಂಕೆಐ ಯುದ್ಧ ವಿಮಾನ ಕಳೆದ ಮಂಗಳವಾರ ನಾಪತ್ತೆಯಾಗಿತ್ತು. ಪೊಲೀಸ್ ಮಹಾ ನಿರ್ದೇಶಕ ಸಂದೀಪ್ ಗೋಯಲ್ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿ, ವಿಮಾನದ ಅವಶೇಷ, ಬ್ಲಾಕ್ ಬಾಕ್ಸ್ ಕಳೆದ ಶುಕ್ರವಾರ ಬೆಳಗ್ಗೆ ಪತ್ತೆಹಚ್ಚಲಾಗಿದ್ದು ಸಿಬ್ಬಂದಿಗಳೇನಾಗಿದ್ದಾರೆ ಎಂದು ಇನ್ನೂ ಗೊತ್ತಾಗಿಲ್ಲ. ಇದಕ್ಕಾಗಿ ವಾಯುಪಡೆ ಸಿಬ್ಬಂದಿಯನ್ನು ಪಶ್ಚಿಮ ಕಮೆಂಗ್ ಜಿಲ್ಲೆಯಲ್ಲಿ ನಿಯೋಜಿಸಲಾಗಿದ್ದು ಅವರು ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ ಎಂದರು.
ಯುದ್ಧ ವಿಮಾನದ ಅವಶೇಷ ಕಳೆದ ಶುಕ್ರವಾರ ಅರುಣಾಚಲ ಪ್ರದೇಶದ ತೇಜ್ ಪುರದಿಂದ 60 ಕಿಲೋ ಮೀಟರ್ ದೂರದಲ್ಲಿ ಪಶ್ಚಿಮ ಕಮೆಂಗ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಸಿಕ್ಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT