ಮಮತಾ ಬ್ಯಾನರ್ಜಿ 
ದೇಶ

ಗೋಹತ್ಯೆ ನಿಷೇಧ ಅಸಂವಿಧಾನಿಕ ಮತ್ತು ಅಕ್ರಮ: ಮಮತಾ ಬ್ಯಾನರ್ಜಿ

ದೇಶಾದ್ಯಂತ ಗೋಹತ್ಯೆ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಹೊಸ ಆದೇಶಕ್ಕೆ ಪಶ್ಚಮಿ ಬಂಗಾಳ ಮುಖ್ಯಮಂತ್ರಿ ಮಮತಾ...

ಕೋಲ್ಕತಾ: ದೇಶಾದ್ಯಂತ ಗೋಹತ್ಯೆ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಹೊಸ ಆದೇಶಕ್ಕೆ ಪಶ್ಚಮಿ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೀವ್ರಿ ವಿರೋಧ ವ್ಯಕ್ತಪಡಿಸಿದ್ದು, ಗೋಹತ್ಯೆ ನಿಷೇಧ ಅಸಂವಿಧಾನಿಕ ಮತ್ತು ಅಕ್ರಮ ಎಂದು ಸೋಮವಾರ ಹೇಳಿದ್ದಾರೆ.
ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಮತಾ, ಕೇಂದ್ರ ನಿರ್ಧಾರ ಸಂವಿಧಾನ ಬಾಹಿರವಾಗಿದ್ದು, ಅದನ್ನು ನಾವು ಒಪ್ಪಿಕೊಳ್ಳುವುದಿಲ್ಲ ಮತ್ತು ಕಾನೂನಾತ್ಮಕವಾಗಿ ಗೋಹತ್ಯೆ ನಿಷೇಧವನ್ನು ಪ್ರಶ್ನಿಸುತ್ತೇವೆ ಎಂದಿದ್ದಾರೆ.
ದೇಶದ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಮತ್ತು ನಾಶಮಾಡುವ ಉದ್ದೇಶದಿಂದ ನರೇಂದ್ರ ಮೋದಿ ಸರ್ಕಾರದ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಆರೋಪಿಸಿದ್ದಾರೆ.
ಸಂವಿಧಾನದ ಪ್ರಕಾರ, ರಾಜ್ಯಗಳಿಗೆ ನಿಯಮಗಳನ್ನು ನಿರ್ದೇಶಿಸುವ ಯಾವುದೇ ಹಕ್ಕು ಕೇಂದ್ರ ಸರ್ಕಾರಕ್ಕೆ ಇಲ್ಲ. ಹೀಗಾಗಿ ಇದನ್ನು ನಾವು ಪ್ರಶ್ನಿಸುತ್ತೇವೆ ಎಂದು ಹೇಳಿದ್ದಾರೆ.
ಕಳೆದ ವಾರ ಕೇಂದ್ರ ಪರಿಸರ ಸಚಿವಾಲಯ ಹೊಸ ಅಧಿಸೂಚನೆ ಹೊರಡಿಸಿದ್ದು, ಗೋವುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡುವುದಕ್ಕೆ ಸಂಪೂರ್ಣ ನಿಷೇಧ ಹೇರಿದೆ.
ಪ್ರಾಣಿಗಳ ವ್ಯಾಪಾರಕ್ಕೆ ಹೊರಡಿಸಿರುವ ಹೊಸ ಆದೇಶದನ್ವಯ ಗೋವುಗಳನ್ನು ಭೂಮಾಲೀಕರಿಗೆ ಮಾತ್ರ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ದಾಖಲೆಗಳ ಸಮೇತ ತಾನು ಕೃಷಿಕ ಎಂಬುದನ್ನು ಸಾಬೀತುಪಡಿಸುವ ವ್ಯಕ್ತಿಗಳಿಗೆ ಮಾತ್ರ ಜಾನುವಾರುಗಳನ್ನು ಮಾರಾಟ ಮಾಡಬಹುದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT