ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 
ದೇಶ

ಕೇರಳದಲ್ಲಿ ಕರುವಿನ ತಲೆ ಕಡಿದು ಕೇಂದ್ರದ ವಿರುದ್ಧ ಆಕ್ರೋಶ: ರಾಹುಲ್ ಗಾಂಧಿ ಖಂಡನೆ

ಪಶು ಮಾರುಕಟ್ಟೆಯಲ್ಲಿ ಹತ್ಯೆಯ ಉದ್ದೇಶಕ್ಕಾಗಿ ಪ್ರಾಣಿಗಳ ಮಾರಾಟ ನಿಷೇಧಿಸಿರುವ ಕೇಂದ್ರದ ಆದೇಶದ ವಿರುದ್ಧ ಕೇರಳದ ಯುವ ಕಾಂಗ್ರೆಸ್ ಕಾರ್ಯಕರ್ತರು ಎಮ್ಮೆ ಕರುವೊಂದನ್ನು ಸಾರ್ವಜನಿಕವಾಗಿ...

ತಿರುವನಂತಪುರ: ಪಶು ಮಾರುಕಟ್ಟೆಯಲ್ಲಿ ಹತ್ಯೆಯ ಉದ್ದೇಶಕ್ಕಾಗಿ ಪ್ರಾಣಿಗಳ ಮಾರಾಟ ನಿಷೇಧಿಸಿರುವ ಕೇಂದ್ರದ ಆದೇಶದ ವಿರುದ್ಧ ಕೇರಳದ ಯುವ ಕಾಂಗ್ರೆಸ್ ಕಾರ್ಯಕರ್ತರು ಕರುವೊಂದನ್ನು ಸಾರ್ವಜನಿಕವಾಗಿ ಶಿರಚ್ಛೇದ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ. 
ಕೇಂದ್ರ ಆದೇಶದ ವಿರುದ್ಧ ಕೇರಳದ ಕಣ್ಣೂರಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು. ಪ್ರತಿಭಟನೆಯಲ್ಲಿ 18 ತಿಂಗಳ ಕರುವೊಂದನ್ನು ಸಾರ್ವಜನಿಕವಾಗಿಯೇ ಹತ್ಯೆ ಮಾಡಿರುವುದಕ್ಕೆ ಭಾರೀ ಆಕ್ರೋಶಗಳು ವ್ಯಕ್ತವಾಗಿದೆ. ಪ್ರಕರಣ ಸಂಬಂಧ 16 ಕಾರ್ಯಕರ್ತರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. 
ಪ್ರಕರಣ ಸಂಬಂಧ ಸ್ವತಃ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರೇ ಖಂಡನೆ ವ್ಯಕ್ತಪಡಿಸಿದ್ದಾರೆ. ಇಂಥ ವಿವೇಚನೆ ಇಲ್ಲದ, ಸ್ವೀಕಾರಾರ್ಹವಲ್ಲದ, ಕ್ರೂರ ಕೃತ್ಯಗಳನ್ನು ಕಾಂಗ್ರೆಸ್ ಎಂದಿಗೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಈ ನಡುವೆ ಕೇರಳ ರಾಜ್ಯ ಸರ್ಕಾರವು ಕೇಂದ್ರ ನಿಯಗಳಿಗೆ ಸಡ್ಡು ಹೊಡೆಯಲು ತನ್ನದೇ ಆದ ಪ್ರತ್ಯೇಕ ಕಾಯ್ದೆ ತರುವ ಸುಳಿವುಗಳನ್ನು ನೀಡಿದೆ ಎಂದು ಮೂಲಗಳು ತಿಳಿಸಿವೆ. 
ಯುವ ಕಾಂಗ್ರೆಸ್ ಕಾರ್ಯಕರ್ತರು ಕರುವಿನ ಶಿರಚ್ಛೇದ ಮಾಡಿರುವ ವಿಡಿಯೋವನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕುಮ್ಮನಮ್ ರಾಜಶೇಖರನ್ ಅವರು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ. ಕ್ರೂರತೆಯ ಪರಾಕಾಷ್ಠೆ. ಕೇರಳದ ಯುವ ಕಾಂಗ್ರೆಸ್ ಕಾರ್ಯಕರ್ತರು ಸಾರ್ವಜನಿಕವಾಗಿ ಕರು ಹತ್ಯೆ ಮಾಡಿದ್ದಾರೆಂದು ಟ್ವೀಟ್ ಮಾಡಿದ್ದಾರೆ. 
ಯುವ ಕಾಂಗ್ರೆಸ್ ಕಾರ್ಯಕರ್ತರು ಕರುವಿನ ಶಿರಚ್ಛೇದ ಮಾಡುತ್ತಿರುವ ದೃಶ್ಯವನ್ನು ಮೂವರು ಸಣ್ಣ ಮಕ್ಕಳು ನೋಡುತ್ತಿರುವುದು ವಿಡಿಯೋದಲ್ಲಿ ಒಳಗೊಂಡಿದೆ. ಆದರೆ, ಇದನ್ನು ತಿರಸ್ಕರಿಸಿರುವ ಕಾಂಗ್ರೆಸ್ ಹತ್ಯೆ ವೇಳೆ ಸ್ಥಳದಲ್ಲಿ ಮಕ್ಕಳು ಇರಲಿಲ್ಲ ಎಂದು ಪ್ರತಿಪಾದಿಸುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT