ಬೈಜಯಂತ್ ಪಾಂಡಾ 
ದೇಶ

ಒಡಿಶಾದಲ್ಲಿ ಬಿಜೆಡಿ ಸಂಸದನ ಮೇಲೆ ಮೊಟ್ಟೆ, ಕಲ್ಲು ತೂರಿದ ಕಾರ್ಯಕರ್ತರು

ಒಡಿಶಾದ ಆಡಳಿತರೂಢ ಬಿಜೆಡಿ ಸಂಸದ ಬೈಜಯಂತ್ ಪಾಂಡಾ ಅವರ ಮೇಲೆ ಪಕ್ಷದ ಕಾರ್ಯಕರ್ತರು ಮೊಟ್ಟೆ ಹಾಗೂ ಕಲ್ಲು....

ಭುವನೇಶ್ವರ: ಒಡಿಶಾದ ಆಡಳಿತರೂಢ ಬಿಜೆಡಿ ಸಂಸದ ಬೈಜಯಂತ್ ಪಾಂಡಾ ಅವರ ಮೇಲೆ ಪಕ್ಷದ ಕಾರ್ಯಕರ್ತರು ಮೊಟ್ಟೆ ಹಾಗೂ ಕಲ್ಲು ತೂರಿದ ಘಟನೆ ಅವರ ಸ್ವಕ್ಷೇತ್ರ ಕೇಂದ್ರಪದದಲ್ಲಿ ಮಂಗಳವಾರ ನಡೆದಿದೆ.
ಇಂದು ಜಾತಿಪರಿಲೊ ಗ್ರಾಮದಲ್ಲಿ ಓವರ್ಹೆಡ್ ವಾಟರ್ ಟ್ಯಾಂಕ್ ಯೋಜನೆ ಉದ್ಘಾಟಿಸುತ್ತಿದ್ದ ಸಂದರ್ಭದಲ್ಲಿ ಬಿಜೆಡಿ ಸಂಸದನ ಮೇಲೆ ಪಕ್ಷದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟರ್ ಮೂಲಕ ಪ್ರತಿಕ್ರಿಯಿಸಿರುವ ಪಾಂಡಾ ಅವರು, ನಾನು ಮೊಟ್ಟೆ ಮತ್ತು ಕಲ್ಲು ತೂರಾಟಕ್ಕೆ ಹೆದರುವುದಿಲ್ಲ. ಕಲ್ಲು ಮತ್ತು ಮೊಟ್ಟೆಯನ್ನು ಬಿಟ್ಟಾಕಿ. ಅವರು ನನ್ನ ಮೇಲೆ ಗುಂಡಿನ ದಾಳಿ ನಡೆಸಿದರು ನಾನು ಜಗ್ಗುವುದಿಲ್ಲ ಎಂದಿದ್ದಾರೆ.
ಇದು ಒಳ್ಳೆಯ ಬೆಳವಣಿಗೆ ಅಲ್ಲ. ನಾನು ಈ ವಿಚಾರವನ್ನು ಪಕ್ಷದ ಮುಖ್ಯಸ್ಥ, ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಗಮನಕ್ಕೆ ತಂದಿದ್ದೇನೆ. ಅವರಿಗೆ ಸತ್ಯ ತಿಳಿದ ಮೇಲೆ ಅಶಿಸ್ತಿನಿಂದ ವರ್ತಿಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಭರವಸೆ ಇದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT