ಐಐಟಿ ಮದ್ರಾಸ್ ವಿದ್ಯಾರ್ಥಿ ಮೇಲೆ ಹಲ್ಲೆ
ಚೆನ್ನೈ: ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಆದೇಶ ವಿರೋಧಿಸಿ ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ)ಯ ಕ್ಯಾಂಪಸ್ ನಲ್ಲಿ ಬೀಫ್ ಫೆಸ್ಟ್ ಆಯೋಜಿಸಿದ್ದ ಪಿಎಚ್ ಡಿ ವಿದ್ಯಾರ್ಥಿ ಮೇಲೆ ಗೋರಕ್ಷಕರು ಗಂಭೀರ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನರ ವಿರುದ್ಧ ಬುಧವಾರ ಪ್ರಕರಣ ದಾಖಲಾಗಿದೆ.
ಕೇಂದ್ರದ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿ ನಿನ್ನೆಯಷ್ಟೇ ಮದ್ರಾಸ್ ಐಐಟಿ ಕ್ಯಾಂಪಸ್ ನಲ್ಲಿ ಬೀಫ್ ಫೆಸ್ಟ್ ಆಯೋಜಿಸಿತ್ತು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಗೋರಕ್ಷಕರು ಐಐಟಿ ವಿದ್ಯಾರ್ಥಿ ಆರ್. ಸೂರಜ್ ಎಂಬುವವರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ್ದರು. ವಿದ್ಯಾರ್ಥಿಯ ಬಲಗಣ್ಣಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ತಮಿಳುನಾಡು ರಾಜ್ಯ ಸರ್ಕಾರ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ತಿಳಿಸಿತ್ತು.
ಇದರಂತೆ ಪ್ರಕರಣ ಸಂಬಂಧ ತನಿಖೆ ಆರಂಭಿಸಿರುವ ಪೊಲೀಸರು ಇದೀಗ 9 ಜನರ ವಿರುದ್ಧ ಐಪಿಸಿ ಸೆಕ್ಷನ್ 324, 341ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.