ಸಾಂದರ್ಭಿಕ ಚಿತ್ರ 
ದೇಶ

ಕೇಂದ್ರ ಕಾನೂನಿನಲ್ಲಿ ಬೀಫ್ ನಿಷೇಧ ಮಾಡುವಂತಾದ್ದು ಏನಿಲ್ಲ: ಕೇರಳ ಹೈಕೋರ್ಟ್ ಅಭಿಪ್ರಾಯ

ಜಾನುವಾರು ಮಾರಾಟ ಮತ್ತು ಹತ್ಯೆಯ ಬಗ್ಗೆ ಕೇಂದ್ರ ಸರ್ಕಾರ ಆದೇಶಿಸಿರುವ ಹೊಸ ಕಾನೂನಿನಲ್ಲಿ, ಗೋಮಾಂಸ ತಿನ್ನುವ ಜನರ ಹಕ್ಕನ್ನು ಕಸಿಯುವ ಯಾವುದೇ ಅಂಶ ಇಲ್ಲ ಎಂದು ಕೇರಳ ಉಚ್ಛ

ತಿರುವನಂತಪುರಂ: ಜಾನುವಾರು ಮಾರಾಟ ಮತ್ತು ಹತ್ಯೆಯ ಬಗ್ಗೆ ಕೇಂದ್ರ ಸರ್ಕಾರ ಆದೇಶಿಸಿರುವ ಹೊಸ ಕಾನೂನಿನಲ್ಲಿ, ಗೋಮಾಂಸ ತಿನ್ನುವ ಜನರ ಹಕ್ಕನ್ನು ಕಸಿಯುವ ಯಾವುದೇ ಅಂಶ ಇಲ್ಲ ಎಂದು ಕೇರಳ ಉಚ್ಛ ನ್ಯಾಯಾಲಯ ಬುಧವಾರ ಅಭಿಪ್ರಾಯಪಟ್ಟಿದೆ. 
ಯುವ ಕಾಂಗ್ರೆಸ್ ಕಾರ್ಯಕರ್ತ ಸುನಿಲ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಾಧೀಶ ನವನೀತಿ ಪ್ರಸಾದ್ ಎದುರು ಬಂದಿತ್ತು. ಈಗ ಮಾತನಾಡುತ್ತಿರುವಂತೆ ಯಾವುದನ್ನು ನಿಷೇಧಿಸಲಾಗಿಲ್ಲ ಎಂದು ನ್ಯಾಯಾಧೀಶ ಹೇಳಿದ್ದಾರೆ. 
"ಸದ್ಯಕ್ಕೆ ದೇಶದಲ್ಲಿರುವ ಕಾನೂನನ್ನು ಮತ್ತು ಈಗ ಬಂದಿರುವ ಹೊಸ ಆದೇಶವನ್ನು ಯಾರಾದರೂ ಸೂಕ್ಷ್ಮವಾಗಿ ಓದಿದ್ದರೆ, ಈ ರೀತಿಯ ಅಭಿಪ್ರಾಯ ತಳೆಯಲು ಸಾಧ್ಯವಿಲ್ಲ. ಹತ್ಯೆಯ ಮೇಲೆ ಆಗಲಿ ಅಥವಾ ಬೀಫ್ ಮಾರಾಟದ ಮೇಲೆ ಆಗಲಿ ಯಾವುದೇ ನಿಷೇಧ ಇಲ್ಲ. ಹೊಸ ಆದೇಶದಲ್ಲಿ ತಿಳಿಸಿರುವುದು ಏನೆಂದರೆ ಜಾತ್ರೆಗಳಲ್ಲಿ ಗುಂಪಾಗಿ ಜಾನುವಾರುಗಳನ್ನು ಮಾರಾಟ ಮಾಡುವುದನ್ನು ಮತ್ತು ಹತ್ಯೆ ಮಾಡುವುದನ್ನು ನಿಷೇಧಿಸಲಾಗಿದೆ" ಎಂದು ಮುಖ್ಯ ನ್ಯಾಯಾಧೀಶ ಅಭಿಪ್ರಾಯಪಟ್ಟಿದ್ದಾರೆ. 
ಮದ್ರಾಸ್ ಉಚ್ಚ ನ್ಯಾಯಾಲಯ ಈ ಹೊಸ ಆದೇಶವನ್ನು ತಡೆ ಹಿಡಿದಿರುವ ಬಗ್ಗೆ ವಕೀಲ ಸಿ ಪಿ ಸುಧಾಕರ ಪ್ರಸಾದ್ ಗಮನ ಸೆಳೆದಾಗ, ಮುಖ್ಯ ನ್ಯಾಯಾಧೀಶ ಅದರ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. 
ಮುಖ್ಯ ನ್ಯಾಯಾಧೀಶ ತಮ್ಮ ನಿಲುವನ್ನು ಖಂಡಿತವಾಗಿ ತಿಳಿಸಿದ್ದರಿಂದ ಅರ್ಜಿದಾರ ಅರ್ಜಿಯನ್ನು ಹಿಂಪಡೆಯುವುದಾಗಿ ತಿಳಿಸಿದ್ದು, ನ್ಯಾಯಾಲಯ ಅದಕ್ಕೆ ಒಪ್ಪಿಗೆ ಸೂಚಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT