ಸಂಗ್ರಹ ಚಿತ್ರ 
ದೇಶ

ಬುರ್ಹಾನ್ ವಾನಿ, ಸಬ್ಜಾರ್ ಭಟ್ ಹತ್ಯೆ ನಂತರ 27 ಹೊಸ ಯುವಕರಿಗೆ ಹಿಬ್ಜುಲ್ ತರಬೇತಿ!

ಬುರ್ಹಾನ್ ವಾನಿ, ಸಬ್ಜಾರ್ ಭಟ್ ಹತ್ಯೆಯ ಬೆನ್ನಲ್ಲೇ 27 ಯುವ ಉಗ್ರರ ಪಡೆಯೊಂದನ್ನು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಸಜ್ಜುಗೊಳಿಸಿದ್ದು, ಕಾಶ್ಮೀರದಲ್ಲಿ ಮತ್ತಷ್ಟು ಹಿಂಸಾಚಾರ ಸೃಷ್ಟಿಸಲು ಸಂಚು ರೂಪಿಸಿ ಭಾರತದೊಳಗೆ...

ಶ್ರೀನಗರ: ಬುರ್ಹಾನ್ ವಾನಿ, ಸಬ್ಜಾರ್ ಭಟ್ ಹತ್ಯೆಯ ಬೆನ್ನಲ್ಲೇ 27 ಯುವ ಉಗ್ರರ ಪಡೆಯೊಂದನ್ನು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಸಜ್ಜುಗೊಳಿಸಿದ್ದು, ಕಾಶ್ಮೀರದಲ್ಲಿ ಮತ್ತಷ್ಟು ಹಿಂಸಾಚಾರ ಸೃಷ್ಟಿಸಲು ಸಂಚು ರೂಪಿಸಿ ಭಾರತದೊಳಗೆ ನುಸುಳಿಸಲು ಮುಂದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 
ಈ ಎಲ್ಲಾ 27 ಉಗ್ರರಿಗೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿಯೇ ತರಬೇತಿ ನೀಡಲಾಗಿದ್ದು, ಉಗ್ರರ ಫೋಟೋಸೆಷನ್ ಕೂಡ ನಡೆಸಲಾಗಿದೆ. 
27 ಹೊಸ ಹಿಜ್ಬುಲ್ ಉಗ್ರ ಪಡೆಯ ಫೋಟೋಗಳನ್ನು ಹಿಜ್ಬುಲ್ ಉಗ್ರ ಸಂಘಟನೆ ಬಿಡುಗಡೆ ಮಾಡಿದ್ದು, ಇದೀಗ ಈ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. 
2015ರಲ್ಲಿ ಹಿಬ್ಜುಲ್ ಉಗ್ರ ಸಂಘಟನೆ ಕಮಾಂಡರ್ ಆಗಿದ್ದ ಬುರ್ಹಾನ್ ವಾನಿ ತನ್ನ 11 ಸಂಗಡಿಗರ ಫೋಟೋವೊಂದನ್ನು ಬಿಡುಗಡೆ ಮಾಡಿದ್ದ. ಈ ಪೈಕಿ 9 ಉಗ್ರರನ್ನು ಭಾರತೀಯ ಸೇನಾಪಡೆ ಹತ್ಯೆ ಮಾಡಿದೆ. ಇದರ ಬೆನ್ಲಲ್ಲೇ ಇದೀಗ ಉಗ್ರ ಪಡೆಗಳು ಮತ್ತೆ ಹೊಸ ಫೋಟೋವನ್ನು ಬಿಡುಗಡೆ ಮಾಡಿದ್ದು, ಮತ್ತಷ್ಟು ದಾಳಿ ನಡೆಸುವ ಸುಳಿವು ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT