ಟಿ.ಟಿ.ವಿ ದಿನಕರನ್ 
ದೇಶ

ಚುನಾವಣಾ ಆಯೋಗಕ್ಕೆ ಲಂಚ ನೀಡಿದ ಪ್ರಕರಣ: ದಿನಕರನ್, ಮಲ್ಲಿಕಾರ್ಜುನ್ ಗೆ ಜಾಮೀನು

ಪಕ್ಷದ ಎರಡು ಎಲೆ ಗುರುತಿಗಾಗಿ ಚುನಾವಣಾ ಆಯೋಗ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪಕ್ಕೆ...

ನವದೆಹಲಿ: ಪಕ್ಷದ ಎರಡು ಎಲೆ ಗುರುತಿಗಾಗಿ ಚುನಾವಣಾ ಆಯೋಗ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪಕ್ಕೆ ಸಂಬಂಧಪಟ್ಟಂತೆ ದೆಹಲಿ ಕೋರ್ಟ್ ಇಂದು ಟಿ.ಟಿ.ವಿ. ದಿನಕರನ್ ಮತ್ತು ಆತನ ಸಹಚರ ಮಲ್ಲಿಕಾರ್ಜುನ್ ಅವರಿಗೆ ಜಾಮೀನು ಮಂಜೂರು ಮಾಡಿದೆ.
ದೆಹಲಿಯ ತಿಜ್ ಹಜಾರಿ ನ್ಯಾಯಾಲಯ ಇಬ್ಬರಿಗೂ ವೈಯಕ್ತಿಕ ಬಾಂಡ್ 5 ಲಕ್ಷ ರೂಪಾಯಿ ನೀಡುವಂತೆ ಆದೇಶ ನೀಡಿದೆ. ಇಬ್ಬರೂ ತಮ್ಮ ಪಾಸ್ ಪೋರ್ಟ್ ನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಾಗಿದೆ.
ಈ ವಿಷಯದಲ್ಲಿ ದಿನಕರನ್ ಗೆ ಮಧ್ಯವರ್ತಿಯಾಗಿದ್ದ ಸುಕೇಶ್ ಚಂದ್ರಶೇಖರ್ ಅವರ ಜಾಮೀನು ಅರ್ಜಿಯನ್ನು ದೆಹಲಿ ಪೊಲೀಸರು ನಿರಾಕರಿಸಿದ್ದರು. ಆ ಬಳಿಕ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿತ್ತು.
ಸುಕೇಶ್ ವಿರುದ್ಧ ಅನೇಕ ಕೇಸುಗಳ ವಿಚಾರಣೆ ಬಾಕಿ ಉಳಿದಿದ್ದು, ಕೇಸಿಗೆ ಸಂಬಂಧಪಟ್ಟಂತೆ ಮುಂದಿನ ದಿನಗಳಲ್ಲಿ ಇನ್ನಷ್ಟು ಬಂಧನಗಳು ಆಗಲಿವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಮಗ್ರತೆ, ಸಮರ್ಪಣೆ ಉದ್ದೇಶದೊಂದಿಗೆ ಕರ್ನಾಟಕ ಜನತೆಗೆ ಸೇವೆ ಸಲ್ಲಿಸಲು ಬದ್ಧ: ಡಿಕೆ ಶಿವಕುಮಾರ್

ದೆಹಲಿಯ ಮೆಹ್ರೌಲಿಯಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ!

ಸಿದ್ದರಾಮಯ್ಯಗೆ ವಿಶ್ರಾಂತಿ ನೀಡಲ್ಲ, ಅವರ ಸೇವೆ ಇನ್ನೂ ಅಗತ್ಯವಿದೆ: CLP ಸಭೆಯಲ್ಲಿ ವೇಣುಗೋಪಾಲ್ ಭಾವುಕ

ಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ: ಡಿಕೆಶಿಗೆ ಸಿದ್ದು ಪತ್ರ!

ಲೋಕಭವನಕ್ಕೆ ತೆರಳಿದ ಡಿ.ಕೆ ಶಿವಕುಮಾರ್: ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ; ಜೂನ್ 3ಕ್ಕೆ ಸಿಎಂ ಆಗಿ ಪ್ರಮಾಣವಚನ!

SCROLL FOR NEXT