ಹಿರಿಯ ಕಾಂಗ್ರೆಸ್ ಮುಖಂಡ ಪಿ ಚಿದಂಬರಂ 
ದೇಶ

ಡಿಮಾನೆಟೈಸೇಶನ್ ಆರ್ಥಿಕ ಅಭಿವೃದ್ಧಿಯನ್ನು ಕುಂಠಿತಗೊಳಿಸುತ್ತದೆ ಎಂದು ಹೇಳಿದ್ದೆ: ಚಿದಂಬರಂ

ಆರ್ಥಿಕ ಅಭಿವೃದ್ಧಿ ಕುಂಠಿತವಾಗಲಿದೆ ಎಂಬ ತಮ್ಮ ಊಹೆ ನಿಜವಾಗಿದ್ದು, ನೋಟು ಹಿಂಪಡೆತ ನಿರ್ಧಾರ ಅದನ್ನು ಇನ್ನಷ್ಟು ಬಿಗಡಾಯಿಸಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ ಚಿದಂಬರಂ

ನವದೆಹಲಿ: ಆರ್ಥಿಕ ಅಭಿವೃದ್ಧಿ ಕುಂಠಿತವಾಗಲಿದೆ ಎಂಬ ತಮ್ಮ ಊಹೆ ನಿಜವಾಗಿದ್ದು, ನೋಟು ಹಿಂಪಡೆತ ನಿರ್ಧಾರ ಅದನ್ನು ಇನ್ನಷ್ಟು ಬಿಗಡಾಯಿಸಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಹೇಳಿದ್ದಾರೆ. 
"ನೋಟು ಹಿಂಪಡೆತ ನಿರ್ಧಾರ ಅಭಿವೃದ್ಧಿಯನ್ನು ೧ ರಿಂದ ೧.೫% ಕುಂಠಿತಗೊಳಿಸಲಿದೆ ಎಂದಿದ್ದೆ. ಈಗ ಹಾಗೆಯೇ ಆಗಿದೆ. ಜಿವಿಎ ೧.೩% ಕುಂಠಿತವಾಗಿದೆ" ಎಂದು ಮಾಜಿ ಕೇಂದ್ರ ವಿತ್ತ ಸಚಿವ ಚಿದಂಬರಂ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬರೆದಿದ್ದಾರೆ. 
"ಜುಲೈ ೨೦೧೬ ರಲ್ಲಿಯೇ ಆರ್ಥಿಕ ಅಭಿವೃದ್ಧಿ ನಿಧಾನವಾಗುತ್ತಿತ್ತು ಮತ್ತು ಡಿಮಾನೆಟೈಸೇಶನ್ ಅದನ್ನು ಮತ್ತಷ್ಟು ಬಿಗಡಾಯಿಸಿತು" ಎಂದು ಕೂಡ ಅವರು ಹೇಳಿದ್ದಾರೆ. 
ಈ ವರ್ಷ ಮಾರ್ಚ್ ಗೆ ಅಂತ್ಯವಾಗುವ ತ್ರೈಮಾಸಿಕದಲ್ಲಿ ಜಿಡಿಪಿ ತೀವ್ರ ಕುಂಠಿತವಾಗಿದ್ದು, ಇದಕ್ಕೆ ಡಿಮಾನೆಟೈಸೆಷನ್ ಕಾರಣ ಎಂದು ಊಹಿಸಲಾಗಿದೆ. ಇದು ೬.೧% ಇಳಿದಿದ್ದು ಆರ್ಥಿಕವಲಯದಲ್ಲಿ ಕಳವಳಕಾರಿ ಅಲೆಗಳನ್ನು ಎಬ್ಬಿಸಿದೆ. 
ಕಳೆದ ವಿತ್ತೀಯ ವರ್ಷದಲ್ಲಿ ಜಿಡಿಪಿ ಅಭಿವೃದ್ಧಿ ೭.೧% ಇತ್ತು ಎಂದು ಅಧಿಕೃತವಾಗಿ ಬಿಡುಗಡೆಯಾದ ಮಾಹಿತಿಯಲ್ಲಿ ತಿಳಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT