ಕೇರಳ ಕಾಂಗ್ರೆಸ್ 
ದೇಶ

ಗೋಹತ್ಯಾ ನಿಷೇಧ ವಿರೋಧಕ್ಕೆ ಸಿಪಿಐ(ಎಂ) ನೊಂದಿಗೆ ಕೈ ಜೋಡಿಸಲು ಸಿದ್ಧ: ಕಾಂಗ್ರೆಸ್

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಹಾಗೂ ಗೋ ಮಾರಾಟ ಕಾಯ್ದೆಯನ್ನು ವಿರೋಧಿಸಲು ಎಡಪಕ್ಷ ಸಿಪಿಐ(ಎಂ) ನೊಂದಿಗೆ ಕೈ ಜೋಡಿಸಲು ಸಿದ್ಧ ಎಂದು ಕೇರಳ ಕಾಂಗ್ರೆಸ್ ಘೋಷಿಸಿದೆ.

ತಿರುವನಂತಪುರಂ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಹಾಗೂ ಗೋ ಮಾರಾಟ ಕಾಯ್ದೆಯನ್ನು ವಿರೋಧಿಸಲು ಎಡಪಕ್ಷ ಸಿಪಿಐ(ಎಂ) ನೊಂದಿಗೆ ಕೈ ಜೋಡಿಸಲು ಸಿದ್ಧ ಎಂದು ಕೇರಳ ಕಾಂಗ್ರೆಸ್ ಘೋಷಿಸಿದೆ. 
ರಾಜ್ಯಪಾಲರನ್ನು ಭೇಟಿ ಮಾಡಿ  ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಮನವಿ ಸಲ್ಲಿಕೆ ಮಾಡಿದ ನಂತರ ಮಾತನಾಡಿರುವ ಕಾಂಗ್ರೆಸ್ ನ ಅಧ್ಯಕ್ಷ ಎಂಎಂ ಹಾಸನ್, ರಾಜ್ಯದಲ್ಲಿ ಅಧಿಕಾರದಲ್ಲಿರುವ ಎಡರಂಗದ ಪಕ್ಷಕ್ಕೂ ನಮಗೂ ವಿವಿಧ ವಿಷಯಗಳಲ್ಲಿ ಭಿನ್ನಾಭಿಪ್ರಾಯವಿದೆ. ಆದರೆ ಅಗತ್ಯ ಉಂಟಾದರೆ ಗೋಹತ್ಯೆ ನಿಷೇಧವನ್ನು ವಿರೋಧಿಸುವುದಕ್ಕೆ ನಾವು ಎಡಪಕ್ಷದವರೊಂದಿಗೆ ಕೈ ಜೋಡಿಸಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದ ನಡೆಯನ್ನು ರಾಜ್ಯ ಸರ್ಕಾರಗಳ ಅಧಿಕಾರವನ್ನು ಮೊಟಕುಗೊಳಿಸುವ ತಂತ್ರ ಎಂದು ಕೇರಳ ಕಾಂಗ್ರೆಸ್ ಅಧ್ಯಕ್ಷರು, ಒಕ್ಕೂಟ ವ್ಯವಸ್ಥೆಯನ್ನು ಒಡೆಯುವ ಹುನ್ನಾರವಾಗಿದೆ. ಇದರ ವಿರುದ್ಧ ವ್ಯಾಪಕ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಗೋಮಾರಾಟ ಹಾಗೂ ಗೋಹತ್ಯೆ ನಿಷೆಧ ಕಾಯ್ದೆಗಳನ್ನು ವಿರೋಧಿಸಿ ಮೇ. 29 ರಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಅಷ್ಟೇ ಅಲ್ಲದೇ ಸಿಎಂ ಪಿಣರಾಯಿ ವಿಜಯ್ ಗೆ ಈ ಬಗ್ಗೆ ಸರ್ವಪಕ್ಷ ಸಭೆ ಕರೆಯುವಂತೆಯೂ ಕಾಂಗ್ರೆಸ್ ಒತ್ತಾಯಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT