ಐಎನ್ಎಸ್ ರಾಣಾ 
ದೇಶ

ಐಎನ್ಎಸ್ ರಾಣಾ ಯುದ್ಧ ನೌಕೆಯಲ್ಲಿ ಯುವ ನಾವಿಕ ಗುಂಡಿಟ್ಟುಕೊಂಡು ಆತ್ಮಹತ್ಯೆಗೆ ಶರಣು

ಐಎನ್ಎಸ್ ರಾಣಾ ಯುದ್ಧ ನೌಕೆಯಲ್ಲಿ ಯುವ ನಾವಿಕ ವಿಕಾಸ್ ಯಾದವ್ ಅವರು ಗುಂಡಿಟ್ಟುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ...

ವಿಶಾಖಪಟ್ಟಣಂ: ಐಎನ್ಎಸ್ ರಾಣಾ ಯುದ್ಧ ನೌಕೆಯಲ್ಲಿ ಯುವ ನಾವಿಕ ವಿಕಾಸ್ ಯಾದವ್ ಅವರು ಗುಂಡಿಟ್ಟುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 
ವೈಜಾಗ್ ನ ಈಸ್ಟರ್ನ್ ನೌಲ್ ಕಮಾಂಡ್ (ಇಎನ್ಸಿ)ಯಲ್ಲಿನ ಐಎನ್ಎಸ್ ರಾಣಾ ಯುದ್ಧನೌಕೆಯಲ್ಲಿ ಸೆಂಟ್ರಿ ಕೆಲಸ ಮಾಡುತ್ತಿದ್ದ ವಿಕಾಸ್ ಯಾದವ್ ತಮ್ಮ ಸರ್ವಿಸ್ ರಿವಾಲ್ವರ್ ನಿಂದ ಗುಂಡಿಟ್ಟುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 
ಗುಂಡಿನ ಸದ್ದು ಕೇಳಿದ ಮತ್ತೊಬ್ಬ ನಾವಿಕ ಘಟನಾ ಸ್ಥಳಕ್ಕೆ ಬರುವಷ್ಟರಲ್ಲಿ ವಿಕಾಸ್ ಯಾದವ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಕೂಡಲೇ ಅವರನ್ನು ಐಎನ್ಎಚ್ಎಸ್ ಕಲ್ಯಾಣಿಗೆ ಸಾಗಿಸಿದರು. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. 
ಮಧ್ಯಪ್ರದೇಶದ ಭಿಂಡ್ ಮೂಲದ 21 ವರ್ಷದ ವಿಕಾಸ್ ಯಾದವ್ ಅವಿವಾಹಿತರಾಗಿದ್ದು, ನೌಕೆಯ ಪವರ್ ಕ್ಲಾಸ್ 1ರಲ್ಲಿ ಎಲೆಕ್ಟ್ರಿಕಲ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದರು. 
ಪ್ರಕರಣವನ್ನು ದಾಖಲಿಸಿಕೊಂಡಿರುವ ಮಲ್ಕಪುರಂ ಪೊಲೀಸರು ಆತ್ಮಹತ್ಯೆ ಹಿಂದಿನ ಕಾರಣ ಪತ್ತೆಗೆ ತನಿಖೆ ಶುರುಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

SCROLL FOR NEXT