ಐಎನ್ಎಸ್ ರಾಣಾ 
ದೇಶ

ಐಎನ್ಎಸ್ ರಾಣಾ ಯುದ್ಧ ನೌಕೆಯಲ್ಲಿ ಯುವ ನಾವಿಕ ಗುಂಡಿಟ್ಟುಕೊಂಡು ಆತ್ಮಹತ್ಯೆಗೆ ಶರಣು

ಐಎನ್ಎಸ್ ರಾಣಾ ಯುದ್ಧ ನೌಕೆಯಲ್ಲಿ ಯುವ ನಾವಿಕ ವಿಕಾಸ್ ಯಾದವ್ ಅವರು ಗುಂಡಿಟ್ಟುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ...

ವಿಶಾಖಪಟ್ಟಣಂ: ಐಎನ್ಎಸ್ ರಾಣಾ ಯುದ್ಧ ನೌಕೆಯಲ್ಲಿ ಯುವ ನಾವಿಕ ವಿಕಾಸ್ ಯಾದವ್ ಅವರು ಗುಂಡಿಟ್ಟುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 
ವೈಜಾಗ್ ನ ಈಸ್ಟರ್ನ್ ನೌಲ್ ಕಮಾಂಡ್ (ಇಎನ್ಸಿ)ಯಲ್ಲಿನ ಐಎನ್ಎಸ್ ರಾಣಾ ಯುದ್ಧನೌಕೆಯಲ್ಲಿ ಸೆಂಟ್ರಿ ಕೆಲಸ ಮಾಡುತ್ತಿದ್ದ ವಿಕಾಸ್ ಯಾದವ್ ತಮ್ಮ ಸರ್ವಿಸ್ ರಿವಾಲ್ವರ್ ನಿಂದ ಗುಂಡಿಟ್ಟುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 
ಗುಂಡಿನ ಸದ್ದು ಕೇಳಿದ ಮತ್ತೊಬ್ಬ ನಾವಿಕ ಘಟನಾ ಸ್ಥಳಕ್ಕೆ ಬರುವಷ್ಟರಲ್ಲಿ ವಿಕಾಸ್ ಯಾದವ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಕೂಡಲೇ ಅವರನ್ನು ಐಎನ್ಎಚ್ಎಸ್ ಕಲ್ಯಾಣಿಗೆ ಸಾಗಿಸಿದರು. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. 
ಮಧ್ಯಪ್ರದೇಶದ ಭಿಂಡ್ ಮೂಲದ 21 ವರ್ಷದ ವಿಕಾಸ್ ಯಾದವ್ ಅವಿವಾಹಿತರಾಗಿದ್ದು, ನೌಕೆಯ ಪವರ್ ಕ್ಲಾಸ್ 1ರಲ್ಲಿ ಎಲೆಕ್ಟ್ರಿಕಲ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದರು. 
ಪ್ರಕರಣವನ್ನು ದಾಖಲಿಸಿಕೊಂಡಿರುವ ಮಲ್ಕಪುರಂ ಪೊಲೀಸರು ಆತ್ಮಹತ್ಯೆ ಹಿಂದಿನ ಕಾರಣ ಪತ್ತೆಗೆ ತನಿಖೆ ಶುರುಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!