ಶಿವರಾಜ್ ಸಿಂಗ್ ಚೌಹಾಣ್ 
ದೇಶ

ವ್ಯಾಪಂ ಹಗರಣದಲ್ಲಿ ಕ್ಲೀನ್ ಚಿಟ್: ಸಿಎಂ ಶಿವರಾಜ್ ಸಿಂಗ್ ವಿರುದ್ಧ ಕಾಂಗ್ರೆಸ್ ನಿಂದ ಹೊಸ ದೂರು

ಬಹುಕೋಟಿ ವ್ಯಾಪಂ ಹಗರಣ ಪ್ರಕರಣ ಸಂಬಂಧ ಮದ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಗೆ ಸಿಬಿಐ ಕ್ಲೀನ್ ಚಿಟ್ ನೀಡಿದೆ. ಈ ಹಿನ್ನೆಲೆಯಲ್ಲಿ...

ನವದೆಹಲಿ: ಬಹುಕೋಟಿ ವ್ಯಾಪಂ ಹಗರಣ ಪ್ರಕರಣ ಸಂಬಂಧ ಮದ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್  ಗೆ ಸಿಬಿಐ ಕ್ಲೀನ್ ಚಿಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಿವರಾಜ್ ಸಿಂಗ್ ಚೌಹಾಣ್ ಗೆ ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಹೊಸ ಕೇಸು ದಾಖಲಿಸಿದೆ.
ವಿಚಾರಣಾ ನ್ಯಾಯಾಲಯದಲ್ಲಿ  ಖಾಸಗಿ ದೂರು ದಾಖಲಿಸಿರುವುದಾಗಿ ಕಾಂಗ್ರೆಸ್ ಹೇಳಿದೆ. ಸಿಬಿಐ ತನಿಖಾಧಿಕಾರಿಗಳ ವಿರುದ್ಧ ತನಿಖೆ ನಡೆಸಬೇಕು, ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಅಲ್ಲ, ಅದು ಕಾಂಪ್ರಮೈಸಡ್ ಬ್ಯೂರೋ ಇನ್ ವೆಸ್ಟಿಗೇಷನ್ ಎಂದು ಕಾಂಗ್ರೆಸ್ ವಕ್ತಾರ ಕಪಿಲ್ ಸಿಬಲ್ ಆರೋಪಿಸಿದ್ದಾರೆ.
ಲಭ್ಯವಿರುವ ಸಾಕ್ಷಿಗಳನ್ನು ಸಿಬಿಐ ಅಧಿಕಾರಿಗಳು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ ಎಂದು ದೂರಿದ್ದಾರೆ.ಹಗರಣಕ್ಕೆ ಸಂಬಂಧಿಸಿದಂತೆ ವ್ಯಾಪಂ ಕಚೇರಿಯಿಂದ ವಶಪಡಿಸಿಕೊಂಡಿದ್ದ ಹಾರ್ಡ್ ಡಿಸ್ಕ್ ನಲ್ಲಿ ಮುಖ್ಯಮಂತ್ರಿ ಚೌಹಾಣ್ ಹೆಸರಿರಲಿಲ್ಲ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ. 
ವ್ಯಾಪಂ ಕಚೇರಿಯಿಂದ ಈ ಹಿಂದೆ ವಶಪಡಿಸಿಕೊಂಡ 3 ಕಂಪ್ಯೂಟರ್ ಗಳ ಹಾರ್ಡ್ ಡಿಸ್ಕ್ ಗಳನ್ನು ವಿಧಿವಿಜ್ಞಾನ ತಜ್ಞರು ಪರಿಶೀಲಿಸಿದ್ದಾರೆ. ಅದನ್ನು ತಿರುಚಲಾಗಿಲ್ಲ. ಇದ್ದಿದ್ದನ್ನು ಇರುವ ಹಾಗೆಯೇ ನಾವು ಭೋಪಾಲ್ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದೇವೆಂದು ಸಿಬಿಐ ತಿಳಿಸಿದೆ. 
ಮುಂದಿನ ವರ್ಷ ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆಯಿದ್ದು, ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಗೆ ಕ್ಲೀನ್ ಚಿಟ್ ನೀಡಿರುವುದರಿಂದ ಬಿಜೆಪಿಗೆ ತುಸು ನಿರಾಳ ತಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT