ಇಸಿಸ್ 
ದೇಶ

ಕಣ್ಣೂರಿನ 6 ಯುವಕರು ಇಸಿಸ್ ಉಗ್ರ ಸಂಘಟನೆಗೆ ಸೇರಿದ್ದಾರೆ: ಕೇರಳ ಪೊಲೀಸರು

ಕೇರಳದ ಕಣ್ಣೂರು ಮೂಲದ ಆರು ಮಂದಿ ಯುವಕರು ಸಿರಿಯಾದಲ್ಲಿ ಇಸಿಸ್ ಉಗ್ರ ಸಂಘಟನೆ ಸೇರಿದ್ದಾರೆ ಎಂದು ಕೇರಳ ಪೊಲೀಸರು ಸ್ಪಷ್ಟಪಡಿಸಿದ್ದಾರೆ...

ಕಣ್ಣೂರು: ಕೇರಳದ ಕಣ್ಣೂರು ಮೂಲದ ಆರು ಮಂದಿ ಯುವಕರು ಸಿರಿಯಾದಲ್ಲಿ ಇಸಿಸ್ ಉಗ್ರ ಸಂಘಟನೆ ಸೇರಿದ್ದಾರೆ ಎಂದು ಕೇರಳ ಪೊಲೀಸರು ಸ್ಪಷ್ಟಪಡಿಸಿದ್ದಾರೆ. 
ಇವರೆಲ್ಲಾ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ ಸದಸ್ಯರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಆರು ಮಂದಿ ಪೈಕಿ ಓರ್ವ ಉಗ್ರ 25 ವರ್ಷದ ಮೊಹಮ್ಮದ್ ಶಾಜೀಲ್ ಎಂಬುವನು ದಾಳಿಯಲ್ಲಿ ಮೃತಪಟ್ಟಿರುವುದಾಗಿ ಆತನ ಪತ್ನಿ ವಿದೇಶದಲ್ಲಿರುವ ಮಾವನಿಗೆ ತಿಳಿಸಿದ್ದಾರೆ. ಮತ್ತೋರ್ವ ಉಗ್ರ ರಶೀದ್ ಮೃತಪಟ್ಟಿರುವುದಾಗಿ ಆತನ ಹೆಂಡತಿ ರಶೀದ್ ತಾಯಿಗೆ ತಿಳಿಸಿದು ಬಂದಿದೆ.
ಇನ್ನು ಕಳೆದ ವಾರ ಅಕ್ಟೋಬರ್ 25ರಂದು ಇಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ ಪೊಲೀಸರು ಕಣ್ಣೂರಿನಲ್ಲಿ ಮಿತಿಲಝ್, ಅಬ್ದುಲ್ ರಝಾಕ್, ರಶೀದ್ ಎಂಬುವರನ್ನು ಬಂಧಿಸಿದ್ದರು. 
ಸುಮಾರು 100ಕ್ಕೂ ಹೆಚ್ಚು ಭಾರತೀಯ ಯುವಕರು ಇಸಿಸ್ ಸೇರಲು ದೇಶವನ್ನು ತೊರೆದಿದ್ದು ಇವರಲ್ಲಿ ಬಹತೇಕರು ಕೇರಳದವರೇ ಆಗಿದ್ದಾರೆ. ಕಳೆದ 2016ರ ಜುಲೈನಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಧಾನಸಭೆಯಲ್ಲಿ ಕಳೆದ ಒಂದು ತಿಂಗಳಲ್ಲಿ 21 ಮುಸ್ಲಿಂ ಯುವಕರು ನಾಪತ್ತೆಯಾಗಿದ್ದು ಇವರೆಲ್ಲಾ ಇಸಿಸ್ ಉಗ್ರ ಸಂಘಟನೆಗೆ ಸೇರಿರಬಹುದು ಎಂದು ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT