ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ನಿರ್ಭಯಾ ತಾಯಿ (ಸಂಗ್ರಹ ಚಿತ್ರ) 
ದೇಶ

ಪೈಲಟ್ ಆದ ನಿರ್ಭಯಾ ಸಹೋದರ: ರಾಹುಲ್ ಗಾಂಧಿಗೆ ಧನ್ಯವಾದ ಹೇಳಿದ ತಾಯಿ

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ 2012ರ ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ನಿರ್ಭಯಾ ಸಹೋದರನ ಕನಸು ನನಸು ಮಾಡುವಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ನೆರವಾಗಿದ್ದು, ಈ ಹಿನ್ನಲೆಯಲ್ಲಿ ನಿರ್ಭಯಾ ತಾಯಿ...

ನವದೆಹಲಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ 2012ರ ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ನಿರ್ಭಯಾ ಸಹೋದರನ ಕನಸು ನನಸು ಮಾಡುವಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ನೆರವಾಗಿದ್ದು, ಈ ಹಿನ್ನಲೆಯಲ್ಲಿ ನಿರ್ಭಯಾ ತಾಯಿ ರಾಹುಲ್ ಅವರಿಗೆ ಗುರುವಾರ ಧನ್ಯವಾದಗಳನ್ನು ಹೇಳಿದ್ದಾರೆ. 

ಸಹೋದರಿಯ ದುರಂತದಿಂದ ನನ್ನ ಮಗ ಸಾಕಷ್ಟು ನೊಂದಿದ್ದಾನೆ. ಆದರೆ, ಆ ನೋವು ಅವನ ಕನಸನ್ನು ನಾಶ ಮಾಡಲಿಲ್ಲ. ಇದೀಗ ನನ್ನ ಪುತ್ರ ಪೈಲಟ್ ಆಗಿದ್ದಾನೆ. ಇದಕ್ಕೆ ಕಾರಣ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಎಂದು ನಿರ್ಭಯಾ ತಾಯಿ ಆಶಾ ದೇವಿಯವರು ಹೇಳಿದ್ದಾರೆ. 

ನಿರ್ಭಯಾ ದುರಂತದ ಬಳಿಕ ನನ್ನ ಪುತ್ರ ಸಾಕಷ್ಟು ನೊಂದಿದ್ದ. ಈ ವೇಳೆ ರಾಹುಲ್ ಗಾಂಧಿಯವರು ಪುತ್ರನಿಗೆ ಸಾಕಷ್ಟು ಸಾಮಾಧಾನ ಹೇಳಿದ್ದರು, ತನ್ನ ಗುರಿ ತಲುಪಲು ಪ್ರೇರಣೆ ನೀಡಿದ್ದರು. ಶಾಲೆ ಮುಗಿದ ಬಳಿಕ ಪೈಲಟ್ ತರಬೇತಿ ಪಡೆಯುವಂತೆ ಸಲಹೆ ನೀಡಿದ್ದರು. 2013ರಲ್ಲಿ ಬರೇಲಿಯಲ್ಲಿ ಇಂದಿರಾ ಗಾಂಧಿ ರಾಷ್ಟ್ರೀಯ ಉರಾನ್ ಅಕಾಡೆಮಿಯಲ್ಲಿ ಪ್ರವೇಶ ಸಿಕ್ಕಿತ್ತು. ಪುತ್ರ ಓದುತ್ತಿದ್ದ ಸಂದರ್ಭದಲ್ಲಿಯೇ ರಾಹುಲ್ ಆವರು ಅವನೊಂದಿಗೆ ಫೋನಿನಲ್ಲಿ ಮಾತನಾಡುತ್ತಿದ್ದರು. 18 ತಿಂಗಳ ಪೈಲಟ್ ತರಬೇತಿ ಸಂದರ್ಭದಲ್ಲಿ ರಾಹುಲ್ ಅವರೇ ಪುತ್ರನಿಗೆ ಸಾಕಷ್ಟು ಪ್ರೇರಣೆ ನೀಡಿದ್ದರು. ಹಿಂದಕ್ಕೆ ಸರಿಯದಂತೆ ಪ್ರೋತ್ಸಾಹ ನೀಡಿದ್ದರು ಎಂದು ಹೇಳಿಕೊಂಡಿದ್ದಾರೆ. 

ಇದಲ್ಲದೆ, ಪ್ರಿಯಾಂಕಾ ಗಾಂಧಿ-ವಾದ್ರಾ ಅವರು ಕೂಡ ನಮ್ಮ ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದರು.

ರಾಹುಲ್ ಆವರ ಪ್ರೋತ್ಸಾಹ ಹಾಗೂ ಧೈರ್ಯ ತುಂಬಿದ್ದರಿಂದ ನನ್ನ ಪುತ್ರ ಇದೀಗ ಗುರುಗ್ರಾಮ್'ನ ವಾಣಿಜ್ಯ ಏರ್ ಲೈನ್ಸ್ ನಲ್ಲಿ ಅಂತಿಮ ಪೈಲಟ್ ತರಬೇತಿ ಪಡೆಯುತ್ತಿದ್ದಾನೆ. ಇನ್ನೂ ಕೆಲವೇ ದಿನಗಳಲ್ಲಿ ತರಬೇತಿ ಪೂರ್ಣಗೊಳ್ಳಲಿದ್ದು, ಶೀಘ್ರವೇ ನನ್ನ ಪುತ್ರ ವಿಮಾನ ಹಾರಿಸಲಿದ್ದಾನೆ. ನಮ್ಮ ಕುಟುಂಬದ ಕನಸನ್ನು ನನಸು ಮಾಡಿರುವ ರಾಹುಲ್ ಗಾಂಧಿಯವರಿದೆ ಧನ್ಯವಾದಗಳು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?