ಸಂಗ್ರಹ ಚಿತ್ರ 
ದೇಶ

ಬಲಪಂಥೀಯರ ಕೋಮುವಾದವೇ ಕೇರಳದ ಇಂದಿನ ಸ್ಥಿತಿಗೆ ಕಾರಣ: ಮತ್ತೆ ನಟ ಕಮಲ್ ಹಾಸನ್ ವಿವಾದ!

ಸದಾ ಒಂದಲ್ಲಾ ಒಂದು ಸುದ್ದಿಗಳಿಂದ ವಿವಾದಕ್ಕೀಡಾಗುತ್ತಿರುವ ದಕ್ಷಿಣ ಭಾರತದ ಖ್ಯಾತ ನಟ ಕಮಲ್ ಹಾಸನ್ ಅವರು ಮತ್ತೊಂದು ವಿಚಾರದ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಚೆನ್ನೈ: ಸದಾ ಒಂದಲ್ಲಾ ಒಂದು ಸುದ್ದಿಗಳಿಂದ ವಿವಾದಕ್ಕೀಡಾಗುತ್ತಿರುವ ದಕ್ಷಿಣ ಭಾರತದ ಖ್ಯಾತ ನಟ ಕಮಲ್ ಹಾಸನ್ ಅವರು ಮತ್ತೊಂದು ವಿಚಾರದ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ತಮಿಳಿನ ಖ್ಯಾತ ದೈನಿಕವೊಂದರಲ್ಲಿ ನಟ ಕಮಲ್ ಹಾಸನ್ ಬರೆದಿರುವ ಅಂಕಣ ಇದೀಗ ಹಿಂದೂಪರ ಸಂಘಟನೆಗಳ ವಿರೋಧಕ್ಕೆ ಕಾರಣವಾಗುತ್ತಿದ್ದು, ಕೇರಳದಲ್ಲಿನ ಹಿಂಸಾಚಾರಕ್ಕೆ ಹಿಂದೂ ಭಯೋತ್ಪಾದನೆಯೇ ಕಾರಣ.  ಬಲಪಂಥೀಯ ವರ್ಗ ಕೋಮುವಾದವನ್ನು ಹರಡುತ್ತಿದೆ. ಕೇರಳದ ಇಂದಿನ ಸ್ಥಿತಿಗೆ ಇದೇ ಕಾರಣ ಎಂದು ಕಮಲ್ ತಮಿಳು ಪತ್ರಿಕೆಯಲ್ಲಿ ಅಂಕಣ ಬರೆದಿದ್ದಾರೆ.
ತಮಿಳಿನ ಖ್ಯಾತ ನಿಯತಕಾಲಿಗೆ ಆನಂದ ವಿಕಟನ್ ಗೆ ಅಂಕಣ ಬರೆದಿರುವ ನಟ ಕಮಲ್, ಹಿಂದೂ ಭಯೋತ್ಪಾದಕರಿಲ್ಲ ಎಂದು ಹೇಳಲು ಸಾಧ್ಯವಿಲ್ಲ..ಬಲಪಂಥೀಯ ವರ್ಗ ಕೋಮುವಾದವನ್ನು ಹರಡುತ್ತಿವ. ಸತ್ಯಮೇವ  ಜಯತೆಯಲ್ಲಿ ನಂಬಿಕೆ ಕಳೆದುಕೊಂಡಿರುವ ಅವರು, ಇದು ಅವರ ಅಮಾನವೀಯತೆಗೆ ಕಾರಣವಾಗಿದೆ. ಅವರ ಈ ನಡೆಗಳೇ ಕೇರಳದ ಇಂದಿನ ಸ್ಥಿತಿಗೆ ಕಾರಣವಾಗಿದೆ ಎಂದು ಬರೆದಿದ್ದಾರೆ.
ಈ ಹಿಂದೆ ಮೋದಿ ಸರ್ಕಾರದ ನೋಟು ನಿಷೇಧವನ್ನು ಬೆಂಬಲಿಸಿ ಬಳಿಕ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದ, ನಟ ಕಮಲ್ ಹಾಸನ್ ಮೆರ್ಸಲ್ ಚಿತ್ರ ವಿವಾದ ಸಂಬಂಧ ಟ್ವೀಟ್ ಮಾಡಿ ಬಾರಿ ಸುದ್ದಿಗೆ ಗ್ರಾಸವಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!