ಚೆನ್ನೈ: ಸದಾ ಒಂದಲ್ಲಾ ಒಂದು ಸುದ್ದಿಗಳಿಂದ ವಿವಾದಕ್ಕೀಡಾಗುತ್ತಿರುವ ದಕ್ಷಿಣ ಭಾರತದ ಖ್ಯಾತ ನಟ ಕಮಲ್ ಹಾಸನ್ ಅವರು ಮತ್ತೊಂದು ವಿಚಾರದ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ತಮಿಳಿನ ಖ್ಯಾತ ದೈನಿಕವೊಂದರಲ್ಲಿ ನಟ ಕಮಲ್ ಹಾಸನ್ ಬರೆದಿರುವ ಅಂಕಣ ಇದೀಗ ಹಿಂದೂಪರ ಸಂಘಟನೆಗಳ ವಿರೋಧಕ್ಕೆ ಕಾರಣವಾಗುತ್ತಿದ್ದು, ಕೇರಳದಲ್ಲಿನ ಹಿಂಸಾಚಾರಕ್ಕೆ ಹಿಂದೂ ಭಯೋತ್ಪಾದನೆಯೇ ಕಾರಣ. ಬಲಪಂಥೀಯ ವರ್ಗ ಕೋಮುವಾದವನ್ನು ಹರಡುತ್ತಿದೆ. ಕೇರಳದ ಇಂದಿನ ಸ್ಥಿತಿಗೆ ಇದೇ ಕಾರಣ ಎಂದು ಕಮಲ್ ತಮಿಳು ಪತ್ರಿಕೆಯಲ್ಲಿ ಅಂಕಣ ಬರೆದಿದ್ದಾರೆ.
ತಮಿಳಿನ ಖ್ಯಾತ ನಿಯತಕಾಲಿಗೆ ಆನಂದ ವಿಕಟನ್ ಗೆ ಅಂಕಣ ಬರೆದಿರುವ ನಟ ಕಮಲ್, ಹಿಂದೂ ಭಯೋತ್ಪಾದಕರಿಲ್ಲ ಎಂದು ಹೇಳಲು ಸಾಧ್ಯವಿಲ್ಲ..ಬಲಪಂಥೀಯ ವರ್ಗ ಕೋಮುವಾದವನ್ನು ಹರಡುತ್ತಿವ. ಸತ್ಯಮೇವ ಜಯತೆಯಲ್ಲಿ ನಂಬಿಕೆ ಕಳೆದುಕೊಂಡಿರುವ ಅವರು, ಇದು ಅವರ ಅಮಾನವೀಯತೆಗೆ ಕಾರಣವಾಗಿದೆ. ಅವರ ಈ ನಡೆಗಳೇ ಕೇರಳದ ಇಂದಿನ ಸ್ಥಿತಿಗೆ ಕಾರಣವಾಗಿದೆ ಎಂದು ಬರೆದಿದ್ದಾರೆ.
ಈ ಹಿಂದೆ ಮೋದಿ ಸರ್ಕಾರದ ನೋಟು ನಿಷೇಧವನ್ನು ಬೆಂಬಲಿಸಿ ಬಳಿಕ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದ, ನಟ ಕಮಲ್ ಹಾಸನ್ ಮೆರ್ಸಲ್ ಚಿತ್ರ ವಿವಾದ ಸಂಬಂಧ ಟ್ವೀಟ್ ಮಾಡಿ ಬಾರಿ ಸುದ್ದಿಗೆ ಗ್ರಾಸವಾಗಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos