ವರ್ಲ್ಡ್ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ 
ದೇಶ

ಮಾನಸಿಕ ರೋಗಿಗಳಲ್ಲಿ ಶೇ.90ರಷ್ಟು ಮಂದಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ದೊರಕುತ್ತಿಲ್ಲ: ರಾಷ್ಟ್ರಪತಿ ಖೇದ

ಭಾರತದಲ್ಲಿ ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವವರಲ್ಲಿ ಶೇಕಡಾ 90ರಷ್ಟು ಜನರಿಗೆ ಸೂಕ್ತ ....

ನವದೆಹಲಿ: ಭಾರತದಲ್ಲಿ ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವವರಲ್ಲಿ ಶೇಕಡಾ 90ರಷ್ಟು ಜನರಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ಸಿಗುವುದಿಲ್ಲ. ಮುಂದಿನ ದಿನಗಳಲ್ಲಿ ಸಂಭಾವ್ಯ ಮಾನಸಿಕ ಆರೋಗ್ಯದ ಸಾಂಕ್ರಾಮಿಕ ರೋಗವನ್ನು ಎದುರಿಸಬೇಕಾಗಬಹುದು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಎಚ್ಚರಿಕೆ ನೀಡಿದ್ದಾರೆ.
ಅವರು ನಿನ್ನೆ ದೆಹಲಿಯಲ್ಲಿ ಮಾನಸಿಕ ಆರೋಗ್ಯದ ವಿಶ್ವ ಕಾಂಗ್ರೆಸ್ ಉದ್ಘಾಟಿಸಿ ಮಾತನಾಡಿ, ವಿಶ್ವ ಆರೋಗ್ಯ ಸಂಸ್ಥೆಯ ಅಂಕಿಅಂಶವನ್ನು ಉಲ್ಲೇಖಿಸಿ ಜಾಗತಿಕ ಮಟ್ಟದಲ್ಲಿ ಭಾರತದಲ್ಲಿ ಅತಿ ಹೆಚ್ಚು ಮಂದಿ ಮಾನಸಿಕ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಹೇಳಿದರು.
2016ರ ರಾಷ್ಟ್ರೀಯ ಮಾನಸಿಕ ಆರೋಗ್ಯ ಸಮೀಕ್ಷೆ ಪ್ರಕಾರ ಭಾರತದ ಜನಸಂಖ್ಯೆಯ ಶೇಕಡಾ 14ರಷ್ಟು ಜನರಿಗೆ ಮಾನಸಿಕ ಆರೋಗ್ಯದ ಚಿಕಿತ್ಸೆಯ ನೆರವು ಬೇಕಾಗಿದೆ. ಶೇಕಡಾ 2ರಷ್ಟು ಜನರು ತೀವ್ರ ಮಾನಸಿಕ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಮಾನಸಿಕ ಕಾಯಿಲೆಗೊಳಗಾದ ಸುಮಾರು 200 ಮಂದಿ ಭಾರತೀಯರು ಪ್ರತಿವರ್ಷ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇನ್ನು ಆತ್ಮಹತ್ಯೆಗೆ ಪ್ರಯತ್ನಿಸುವವರ ಸಂಖ್ಯೆ ಇನ್ನೂ ಅಧಿಕವಾಗಿದೆ ಎಂದರು.
ಇದು ಆತಂಕಪಡುವ ಅಂಕಿಅಂಶವಾಗಿದೆ. ಮಹಾನಗರ ಪಾಲಿಕೆಗಳಲ್ಲಿ ವಾಸಿಸುತ್ತಿರುವ ಮತ್ತು ಯುವ ವಯಸ್ಸಿನವರು, ಮಕ್ಕಳು, ಹದಿಹರೆಯದವರು ಮಾನಸಿಕ ಕಾಯಿಲೆಗೀಡಾಗುವುದು ಕಳವಳಕಾರಿ ಸಂಗತಿಯಾಗಿದೆ. ಭಾರತದಲ್ಲಿ ಶೇಕಡಾ 65ರಷ್ಟು ಜನರು 35 ವರ್ಷಕ್ಕಿಂತ ಒಳಗಿನವರಾಗಿದ್ದು ಇಂತವರು ಮಾನಸಿಕ ಕಾಯಿಲೆಗೀಡಾಗುವುದು ಖೇದಕರ ವಿಚಾರ ಎಂದು ರಾಷ್ಟ್ರಪತಿ ಬೇಸರ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo ಅವಾಂತರ ತಹಬದಿಗೆ: ಅಡಚಣೆ ಪ್ರಮಾಣ ಇಳಿಕೆ; 'ಹಂತಹಂತವಾಗಿ ಮರಳುತ್ತಿದ್ದೇವೆ' ಎಂದ CEO

LeT ಜೊತೆಗೆ ಒಪ್ಪಂದ; ಹಮಾಸ್ 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿ; ಭಾರತಕ್ಕೆ ಇಸ್ರೇಲ್ ಒತ್ತಾಯ!

ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ: 'ತಿಥಿ' ಹೀರೋಗೆ ಇಂದೆಂಥಾ ಸ್ಥಿತಿ?, ಅಭಿ ಈಗ ದಿನಗೂಲಿ ಕಾರ್ಮಿಕ!

ಮದುವೆ ರದ್ದು ಬೆನ್ನಲ್ಲೇ ಪರಸ್ಪರ 'ಅನ್‌ಫಾಲೋ' ಮಾಡಿಕೊಂಡ ಸ್ಮೃತಿ ಮಂಧಾನ, ಪಲಾಶ್ ಮುಚ್ಚಲ್!

Goa nightclub fire: ರೆಸ್ಟೋರೆಂಟ್‌ ಮಾಲೀಕ, ಕಾರ್ಯಕ್ರಮ ಆಯೋಜಕರ ವಿರುದ್ಧ FIR; ಸರಪಂಚ್ ಬಂಧನ!

SCROLL FOR NEXT