ಪ್ರಕಾಶ್ ರೈ 
ದೇಶ

ಹಿಂದೂ ಭಯೋತ್ಪಾದನೆ: ಕಮಲ್ ಬೆಂಬಲಕ್ಕೆ ನಿಂತ ಪ್ರಕಾಶ್ ರೈ

ಹಿಂದೂ ಭಯೋತ್ಪಾದನೆ ಇರುವುದನ್ನು ಬಲಪಂಥೀಯರು ತಳ್ಳಿಹಾಕಲು ಸಾಧ್ಯವಿಲ್ಲ ಎಂಬ ನಟ ಕಮಲ್ ಹಾಸನ್ ಅಭಿಪ್ರಾಯವನ್ನು ನಟ ಪ್ರಕಾಶ್ ರೈ, ಬೆಂಬಲಿಸಿದ್ದಾರೆ.

ಚೆನ್ನೈ: ಹಿಂದೂ ಭಯೋತ್ಪಾದನೆ ಇರುವುದನ್ನು ಬಲಪಂಥೀಯರು ತಳ್ಳಿಹಾಕಲು ಸಾಧ್ಯವಿಲ್ಲ ಎಂಬ ನಟ ಕಮಲ್ ಹಾಸನ್ ಅಭಿಪ್ರಾಯವನ್ನು ನಟ ಪ್ರಕಾಶ್ ರೈ, ಬೆಂಬಲಿಸಿದ್ದಾರೆ. 
ಧರ್ಮ, ಸಂಸ್ಕೃತಿ, ನೈತಿಕತೆ ಹೆಸರಿನಲ್ಲಿ ಭಯವನ್ನು ಹುಟ್ಟಿಸುವುದು ಭಯೋತ್ಪಾದನೆಯಾಗುವುದಿಲ್ಲವೇ ಹಾಗಿಲ್ಲವಾದರೆ ಅದನ್ನು ಏನೆಂದು ಪ್ರಶ್ನಿಸುತ್ತಾರೆ ಎಂದು ಪ್ರಕಾಶ್ ರೈ ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ. 
" ಸಂಬಂಧಪಟ್ಟವರಿಗೆ" ಎಂದು ಬರೆದಿರುವ ಪ್ರಕಾಶ್ ರೈ, ನನ್ನ ದೇಶದ ಯುವ ಜತನೆಯನ್ನು ನೈತಿಕತೆ ರಸ್ತೆಯಲ್ಲಿ ಥಳಿಸುವುದು ಭಯೋತ್ಪಾದನೆಯಲ್ಲವೇ ಎಂದು ಪ್ರಕಾಶ್ ರೈ ಪ್ರಶ್ನಿಸಿದ್ದಾರೆ. ಗೋಹತ್ಯೆ ನಡೆದಿರುವ ಅನುಮಾನದಿಂದಾಗಿ ಕಾನೂನನ್ನು ಕೈಗೆತ್ತಿಕೊಂಡು ಥಳಿಸುವುದು, ಟ್ರೋಲ್ ಮಾಡಿ, ನಿಂದಿಸುವುದು, ಭಿನ್ನಾಭಿಪ್ರಾಯಗಳಿಗೆ ಬೆದರಿಕೆ ಹಾಕುವುದು ಭಯೋತ್ಪಾದನೆ ಅಲ್ಲದೇ ಇದ್ದರೆ, ಮತ್ತೇನನ್ನು ಭಯೋತ್ಪಾದನೆ ಎನ್ನಬೇಕು ಎಂದು ಪ್ರಕಾಶ್ ರೈ ಟ್ವೀಟ್ ಮಾಡಿದ್ದಾರೆ. 
ಕಮಲ್ ಹಾಸನ್ ಅವರು ಹಿಂದೂ ಭಯೋತ್ಪಾದನೆ ಇರುವುದನ್ನು ಬಲಪಂಥೀಯರು ತಳ್ಳಿಹಾಕುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದರು, ಈ ಬೆನ್ನಲ್ಲೇ ಪ್ರಕಾಶ್ ರೈ ಸಹ ಭಯೋತ್ಪಾದನೆ ಬಗ್ಗೆ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಂಧನ ಬೆಲೆ ಸೇರಿದಂತೆ ಉಕ್ರೇನ್ ಸಂಘರ್ಷದ ಪ್ರತಿಕೂಲ ಪರಿಣಾಮ ಜಾಗತಿಕ ದಕ್ಷಿಣ ದೇಶಗಳ ಮೇಲೆ ಬೀರುತ್ತಿದೆ: UNGA ಯಲ್ಲಿ ಭಾರತ ವಿಷಾದ

ನಾನು ಹೇಳಿದ್ರೂ ಕೇಳೋಲ್ವಾ, ಎಷ್ಟು ಧೈರ್ಯ ನಿನಗೆ? ಮಹಿಳಾ IPS ಅಧಿಕಾರಿ ಜೊತೆ ಅಜಿತ್ ಪವಾರ್ ವಾಗ್ವಾದ; ವಿಡಿಯೋ ವೈರಲ್

MUDA ಕೇಸ್: ಸಿಎಂಗೆ ಕ್ಲೀನ್ ಚಿಟ್ ನೀಡಿದ್ದ ದೇಸಾಯಿ ಆಯೋಗ ವರದಿಗೆ ಸಂಪುಟ ಅನುಮೋದನೆ, ಅಧಿಕಾರಿಗಳು-ಅಕ್ರಮ ಫಲಾನುಭವಿಗಳಿಂದ ನಷ್ಟ ವಸೂಲಿಗೆ ನಿರ್ಧಾರ

ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ನಿರ್ಧಾರ: ಇಡೀ ಜಗತ್ತು ತಂತ್ರಜ್ಞಾನವನ್ನು ಆಧರಿಸಿ ವೇಗವಾಗಿ ನಡೆಯುತ್ತಿದ್ದರೆ, ಕಾಂಗ್ರೆಸ್ ಹೆಬ್ಬೆಟ್ಟಿನ ದಿನಗಳ ನೆನಪಿಸಲು ಹೊರಟಿದೆ..!

ಬೆಂಗಳೂರಿನಲ್ಲಿ ಈದ್ ಮಿಲಾದ್ ಸಂಭ್ರಮ; ನಗರದ ಹಲವಡೆ ಸಂಚಾರ ಬದಲಾವಣೆ, ಪರ್ಯಾಯ ಮಾರ್ಗಗಳು ಹೀಗಿವೆ...

SCROLL FOR NEXT