ಕೃಷ್ಣಾ ಸೋಬ್ತಿ 
ದೇಶ

ಹಿಂದಿ ಲೇಖಕಿ ಪದ್ಮ ಭೂಷಣ ವಿಜೇತೆ ಕೃಷ್ಣಾ ಸೋಬ್ತಿ ಗೆ ಜ್ಞಾನಪೀಠ ಪ್ರಶಸ್ತಿ

ಸಾಹಿತ್ಯ ಕ್ಷೇತ್ರದ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿಗೆ ಹಿಂದಿ ಕವಯಿತ್ರಿ, ಲೇಖಕಿ ಕೃಷ್ಣಾ ಸೋಬ್ತಿ ಆಯ್ಕೆಗೊಂಡಿದ್ದಾರೆ

ನವದೆಹಲಿ: ಸಾಹಿತ್ಯ ಕ್ಷೇತ್ರದ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿಗೆ ಹಿಂದಿ ಕವಯಿತ್ರಿ, ಲೇಖಕಿ ಕೃಷ್ಣಾ ಸೋಬ್ತಿ ಆಯ್ಕೆಗೊಂಡಿದ್ದಾರೆ. ಸಾಹಿತ್ಯ ಕ್ಷೇತ್ರಕ್ಕೆ ಅವರು ಸಲ್ಲಿಸಿದಗಣನೀಯ ಕೊಡುಗೆಗಾಗಿ ಅವರನ್ನು ಈ ಪ್ರಶಸ್ತಿಉಗೆ ಆಯ್ಕೆ ಮಾಡಲಾಗಿದೆ ಎಂದು ಆಯ್ಕೆ ಸಮಿತಿ ತಿಳಿಸಿದೆ.
92ರ ಹರೆಯದ ಕೃಷ್ಣಾ ಸೋಬ್ತಿ 1925ರಲ್ಲಿ ಪಾಕಿಸ್ತಾನದ ಗುಜರಾತ್‌ನಲ್ಲಿ ಜಜಿಸಿದರು. ದೇಶ ವಿಭಜನೆ ಬಳಿಕ ಬಾರತದಲ್ಲೇ ನೆಲೆಯಾದ ಇವರು  ಹಿಂದಿ ಸಾಹಿತ್ಯದಲ್ಲಿ ಹೊಸ ಶೈಲಿ ಮತ್ತು ಸೃಜನಶೀಲ ಪ್ರಯೋಗಗಳಿಗೆ ಹೆಸರಾದವರು. ಲಾಹೋರ್ ನಲ್ಲಿ ಉನ್ನತ ಶಿಕ್ಷಣ ಪಡೆದಿದ್ದ ಇವರ ಸಾಹಿತ್ಯದಲ್ಲಿ ಉರ್ದು, ಪಂಜಾಬಿ ಮತ್ತು ರಾಜಸ್ಥಾನಿ ಭಾಷೆಗಳ ಗಾಢ ಪ್ರಭಾವ ಅವರ ಕೃತಿಗಳಲ್ಲಿ ಎದ್ದು ಕಾಣುತ್ತದೆ. 
ಗಂಡು-ಹೆಣ್ಣಿನ ನಡುವಿನ ಭಾವನಾತ್ಮಕ ಸಂಬಂಧ, ಸಾಮಾಜಿಕ ಬದಲಾವಣೆಯ ಸ್ವರೂಪ, ಅವರ ಸಾಹಿತ್ಯ ಕೃತಿಗಳಲ್ಲಿ ನಾವು ಗಮನಿಸಬಹುದು. 15ಕ್ಕೂ ಹೆಚ್ಚು ಕಾದಂಬರಿ, ಹಲವಾರು ಸಣ್ಣ ಕಥೆ, ಪ್ರಬಂಧಗಳನ್ನು ಬರೆದಿರುವ ಕೃಷ್ಣಾ  ಅವರ ದಾರ್‌ ಸೆ ಬಿಚ್ಚುಡಿ, ಮಿತ್ರೋ ಮರಜಾನಿ, ಜಿಂದಗಿನಾಮಾ, ದಿಲ್‌ –ಒ–ದಾನಿಶ್‌, ಏ ಲಡಕಿ, ಸೂರಜ್‌ಮುಖಿ ಅಂಧೇರೆ ಕೆ, ಗುಜರಾತ್‌ ಪಾಕಿಸ್ತಾನ ಸೆ ಗುಜರಾತ್‌ ಹಿಂದುಸ್ತಾನ್ ಕೃತಿಗಳು ಅವರಿಗೆ ಖ್ಯಾತಿ ತಂದುಕೊಟ್ಟಿವೆ.
ಇವರ ಬಹುತೇಕ ಕೃತಿಗಳು ಭಾರತೀಯ ಭಾಷೆಗಳಿಗೆ ಸೇರಿದಂತೆ ಇಂಗ್ಲಿಷ್‌, ರಷ್ಯಾ ಮತ್ತು ಸ್ವೀಡನ್‌ ಭಾಷೆಗೆ ಭಾಷಾಂತರಗೊಂಡಿವೆ. ಡೋಗ್ರಿ ಭಾಷೆಯ ಲೇಖಕ ಶಿವನಾಥ್‌  ಅವರನ್ನು ವಿವಾಹವಾಗಿರುವ ಇವರು ಇದೀಗ ಪತಿಯೊಂದಿಗೆ ದೆಹಲಿಯಲ್ಲಿ ವಾಸವಿದ್ದಾರೆ.
ಕೃಷ್ಣಾ  ಅವರ ಸಾಹಿತ್ಯ ಕೊಡುಗೆಯನ್ನು ಪರಿಗಣಿಸಿ ಅನೇಕ ಪ್ರಶಸ್ತಿ ಪುರಸ್ಕಾರಗಳು ಬಂದಿದ್ದು ಅವುಗಳಲ್ಲಿ ‘ಜಿಂದಗಿನಾಮಾ’ಕ್ಕೆ ಸಂದ 1980ರ ಸಾಲಿನ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮಭೂಷಣ, ಸಾಹಿತ್ಯ ಅಕಾಡೆಮಿ ಫೆಲೋಶಿಪ್‌, ಹಿಂದಿ ಅಕಾಡೆಮಿ ಪ್ರಶಸ್ತಿ, ಮೈಥಲಿ ಶರಣ್ ಗುಪ್ತಾ ಸನ್ಮಾನ ಸಂದಿದೆ. ಇದೀಗ ಕೃಷ್ಣಾ ಅವರು 53ನೇ ಜ್ಞಾನಪೀಠ ಪ್ರಶಸ್ತಿ ಗೌರವಕ್ಕೆ  ಪಾತ್ರರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT