ಬಿ.ಆರ್.ಅಂಬೇಡ್ಕರ್ 
ದೇಶ

ಡಾ. ಅಂಬೇಡ್ಕರ್ ಶಾಲಾ ಸೇರ್ಪಡೆಯ 117ನೇ ವರ್ಷಾಚರಣೆ, ಮಹಾರಾಷ್ಟ್ರ ಸರ್ಕಾರದಿಂದ ನ 7 'ವಿದ್ಯಾರ್ಥಿಗಳ ದಿನ' ಎಂದು ಘೋಷಣೆ

ಮಹಾರಾಷ್ಟ್ರ ಸರ್ಕಾರ ತನ್ನ ರಾಜ್ಯದಲ್ಲಿನ ಶಾಲೆ-ಕಾಲೇಜುಗಳಲ್ಲಿ ನವೆಂಬರ್ 7 ನ್ನು 'ವಿದ್ಯಾರ್ಥಿಗಳ ದಿನ'ಎಂದು ಆಚರಿಸಬೇಕೆಂದು ಕರೆ ನೀಡಿದೆ.

ಮುಂಬೈ: ಮಹಾರಾಷ್ಟ್ರ ಸರ್ಕಾರ ತನ್ನ ರಾಜ್ಯದಲ್ಲಿನ ಶಾಲೆ-ಕಾಲೇಜುಗಳಲ್ಲಿ ನವೆಂಬರ್ 7 ನ್ನು 'ವಿದ್ಯಾರ್ಥಿಗಳ ದಿನ'ಎಂದು ಆಚರಿಸಬೇಕೆಂದು ಕರೆ ನೀಡಿದೆ. ಅಂದಿಗೆ ಸರಿಯಾಗಿ 117 ವರ್ಷಗಳ ಹಿಂದೆ ಡಾ.ಬಿ ಆರ್ ಅಂಬೇಡ್ಕರ್ ಶಾಲಾ ಶಿಕ್ಷಣಕ್ಕೆ ಪ್ರವೇಶ ಪಡೆದಿದ್ದರು.
ಈ ನಿಟ್ಟಿನಲ್ಲಿ ಅ. 27 ರಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಕ್ರೀಡಾ ಇಲಾಖೆಯಿಂದ ಹೊರಡಿಸಲಾದ ಸರ್ಕಾರದ ನಿರ್ಣಯ (ಜಿಆರ್) ದಲ್ಲಿ ಅಂಬೇಡ್ಕರ್ ಶಾಲಾ ವಿದ್ಯಾಭ್ಯಾಸ ಪ್ರಾರಂಭದೊಡನೆ ಹೊಸ ಯುಗವೊಂದು ಪ್ರಾರಂಭವಾಗಿತ್ತು ಎಂದು ಬಣ್ಣಿಸಲಾಗಿದೆ. ಡಾ ಅಂಬೇಡ್ಕರ್  ರಾಷ್ಟ್ರಕ್ಕೆ  ನೀಡಿದ ಸಂವಿಧಾನದ ಕಾರಣ  ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ಕಾನೂನಿನ ಮೌಲ್ಯಗಳು ಇಂದು ಸಮಾಜದಲ್ಲಿ ಬೇರೂರಿವೆ ಎಂದು ನಿರ್ಣಯದಲ್ಲಿ ವಿವರಿಸಿದೆ.
" ಡಾ. ಬಿ.ಆರ್.ಅಂಬೇಡ್ಕರ್ ಅವರು ಶಾಲೆಯಲ್ಲಿ ವಿದ್ಯಾರ್ಥಿಯಾಗಿ ದಾಖಲಾಗಿದ್ದು, ಇದು ಒಂದು ಐತಿಹಾಸಿಕ ಘಟನೆ ಮತ್ತು ಭಾರತದ ಇತಿಹಾಸದ ದಿಕ್ಕನ್ನು ಬದಲಿಸಿದೆ. ಡಾ. ಅಂಬೇಡ್ಕರ್ ಅವರು ಜೀವಮಾನದ ಪರ್ಯಂತ ವಿದ್ಯಾರ್ಥಿಯಾಗಿದ್ದರು ಮತ್ತು ಅವರ ಜೀವನದುದ್ದಕ್ಕೂ ಕಲಿಕಾ ಆಸಕ್ತಿ ತಾಳಿದ್ದರು"
"ಪ್ರತಿ ವಿದ್ಯಾರ್ಥಿ ಯೂ ದೇಶದ ಭವಿಷ್ಯ ಮತ್ತು ಶಿಕ್ಷಣ ಮಾತ್ರ ಪ್ರಗತಿಗೆ ಸಾಧನ ಆಗಿದೆ, ಎಲ್ಲಾ ಶಾಲೆಗಳು ಮತ್ತು ಜೂನಿಯರ್ ಕಾಲೇಜುಗಳು ಪ್ರಬಂಧ ಬರವಣಿಗೆ, ಚರ್ಚಾ ಸ್ಪರ್ಧೆಗಳು, ಕವಿತೆ ಓದುವಿಕೆ ಮತ್ತಿತರೆ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಆ ದಿನವನ್ನು ಸ್ಮರಣೀಯವಾಗಿಸಬೇಕು "ಎಂದು ನಿರ್ಣಯದಲ್ಲಿ ಹೇಳಲಾಗಿದೆ.
ಡಾ.ಅಂಬೇಡ್ಕರ್ ನವೆಂಬರ್ 7, 1900 ರಂದು ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಪ್ರತಾಪ್ ಸಿಂಗ್ ಪ್ರೌಢ ಶಾಲೆಗೆ  ವಿದ್ಯಾರ್ಥಿಯಾಗಿ ಸೇರ್ಪಡೆಗೊಂಡರು. ಅವರು ಶಾಲೆಯ ದಾಖಲಾತಿಯಲ್ಲಿ '1914' ಎಂಬ ರೋಲ್ ನಂಬರ್ ಪಡೆದಿದ್ದರು. ಅವರು ಸಹಿ ಮಾಡಿದ್ದ ಆ ದಾಖಲಾತಿ ಪತ್ರವನ್ನು ಶಾಲೆಯವರು ಇಂದಿಗೂ ಐತಿಹಾಸಿಕ ದಾಖಲೆ ಎಂದು ಪರಿಗಣಿಸಿ ಕಾಪಾಡಿಕೊಂಡು ಬಂದಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT