ಬಂಧನ 
ದೇಶ

ತಮಿಳುನಾಡು: ಸಿಎಂ, ಪೊಲೀಸ್ ಆಯುಕ್ತ, ಜಿಲ್ಲಾಧಿಕಾರಿ ವಿರುದ್ಧ ಆಕ್ಷೇಪಾರ್ಹ ವ್ಯಂಗ್ಯ ಚಿತ್ರ: ಕಾರ್ಟೂನಿಸ್ಟ್ ಬಂಧನ

ತಮಿಳುನಾಡಿ ಸಿಎಂ ಎಡಪ್ಪಾಡಿ ಪಳನಿಸ್ವಾಮಿ, ತಿರುನಲ್ವೇಲಿ ಪೊಲೀಸ್ ಆಯುಕ್ತ, ಜಿಲ್ಲಾಧಿಕಾರಿ ಬಗ್ಗೆ ವ್ಯಂಗ್ಯ ಚಿತ್ರ ರಚಿಸಿದ್ದ ವ್ಯಂಗ್ಯ ಚಿತ್ರಕಲಾವಿದ ಜಿ ಬಾಲಕೃಷ್ಣನ್ (36) ನ್ನು ಬಂಧಿಸಲಾಗಿದೆ.

ತಿರುನಲ್ವೇಲಿ: ತಮಿಳುನಾಡಿ ಸಿಎಂ ಎಡಪ್ಪಾಡಿ ಪಳನಿಸ್ವಾಮಿ, ತಿರುನಲ್ವೇಲಿ ಪೊಲೀಸ್ ಆಯುಕ್ತ, ಜಿಲ್ಲಾಧಿಕಾರಿ ಬಗ್ಗೆ ವ್ಯಂಗ್ಯ ಚಿತ್ರ ರಚಿಸಿದ್ದ ವ್ಯಂಗ್ಯ ಚಿತ್ರಕಲಾವಿದ ಜಿ ಬಾಲಕೃಷ್ಣನ್ (36) ನ್ನು ಬಂಧಿಸಲಾಗಿದೆ. 
ಕುಟುಂಬವೊಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಸಂಬಂಧಿಸಿದಂತೆ ಬಾಲಕೃಷ್ಣನ್ ಮುಖ್ಯಮಂತ್ರಿ ಪಳನಿಸ್ವಾಮಿ, ತಿರುನಲ್ವೇಲಿ ಪೊಲೀಸ್ ಆಯುಕ್ತ, ಜಿಲ್ಲಾಧಿಕಾರಿ ಬಗ್ಗೆ ಆಕ್ಷೇಪಾರ್ಹ ವ್ಯಂಗ್ಯ ಚಿತ್ರ ರಚಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಈ ವ್ಯಂಗ್ಯ ಚಿತ್ರ ವೈರಲ್ ಆಗಿ, ಈಗ ವ್ಯಂಗ್ಯ ಚಿತ್ರ ರಚಿಸಿದ್ದ ಬಾಲಕೃಷ್ಣನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 
ಅತ್ಯಂತ ಕೋಪದಿಂದ ಈ ವ್ಯಂಗ್ಯಚಿತ್ರವನ್ನು ರಚಿಸಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬಾಲಕೃಷ್ಣನ್ ಹೇಳಿದ್ದರು. " ನಾನು ಟೀಕೆಯ ವಿರುದ್ಧವಾಗಿಲ್ಲ. ಆದರೆ ವ್ಯಂಗ್ಯ ಚಿತ್ರಕಾರರು ಘಟನೆಯ ವಾಸ್ತವಾಂಶಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳದೇ ಮುಖ್ಯಮಂತ್ರಿ, ಪೊಲೀಸ್ ಆಯುಕ್ತ, ಜಿಲ್ಲಾಧಿಕಾರಿಯ ಬಗ್ಗೆ ಅವಮಾನಕರ ರೀತಿಯಲ್ಲಿ ವ್ಯಂಗ್ಯಚಿತ್ರ ರಚಿಸಿದ್ದಾರೆ, ಲಂಚ ಸ್ವೀಕರಿಸಿದ ಪ್ರಕರಣದ ಬಗ್ಗೆ ಮೌನ ವಹಿಸಿದ್ದೇವೆ ಎಂಬ ತಪ್ಪು ಸಂದೇಶವನ್ನು ಜನತೆಗೆ ರವಾನಿಸುತ್ತದೆ ಎಂದು ಜಿಲ್ಲಾಧಿಕಾರಿ ಸಂದೀಪ್  ನಂದೂರಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT