ಮಸೂದ್ ಅಜರ್ 
ದೇಶ

ಕಾಶ್ಮೀರದಲ್ಲಿ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಗೆ ದಾರಿ ಮಾಡಿಕೊಡುತ್ತಿರುವ ಲಷ್ಕರ್!

ಉಗ್ರ ಸಂಘಟನೆ ಲಷ್ಕರ್-ಎ-ತಯ್ಬಾ ಪಾಕಿಸ್ತಾನದ ರಾಜಕಾರಣದ ಮುನ್ನೆಲೆಗೆ ಎಂಟ್ರಿ ಕೊಡಲು ಯತ್ನಿಸುತ್ತಿರುವುದು ಕಾಶ್ಮೀರದಲ್ಲಿ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಗೆ

ನವದೆಹಲಿ: ಉಗ್ರ ಸಂಘಟನೆ ಲಷ್ಕರ್-ಎ-ತಯ್ಬಾ ಪಾಕಿಸ್ತಾನದ ರಾಜಕಾರಣದ ಮುನ್ನೆಲೆಗೆ ಎಂಟ್ರಿ ಕೊಡಲು ಯತ್ನಿಸುತ್ತಿರುವುದು ಕಾಶ್ಮೀರದಲ್ಲಿ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಗೆ ಒಳನುಸುಳಲು ಸಹಕಾರಿಯಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 
ಟೈಮ್ಸ್ ಆಫ್ ಇಂಡಿಯಾ ಪ್ರಕಟಿಸಿರುವ ವರದಿಯ ಪ್ರಕಾರ, ಕಾಶ್ಮೀರದಲ್ಲಿ ಜಿಹಾದ್ ನ್ನು ತೀವ್ರಗೊಳಿಸುವುದಕ್ಕೆ ಉಗ್ರ ಸಂಘಟನೆಯ ಮುಖಂಡ ಮಸೂದ್ ಅಜರ್  ಹೆಚ್ಚು ಸಂಪನ್ಮೂಲಗಳನ್ನು ಬಳಕೆ ಮಾಡುತ್ತಿದ್ದಾನೆ. ಅಷ್ಟೇ ಅಲ್ಲದೇ ಬಿಎಸ್ಎಫ್ ಕ್ಯಾಂಪ್ ಹಾಗೂ ಇನ್ನಿತರ ದಾಳಿಯಲ್ಲಿ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಕೈವಾಡ ಇರುವುದನ್ನೂ ಸಹ ಬಹಿರಂಗವಾಗಿ ಹೇಳಿದ್ದಾನೆ. 
ಪಾಕಿಸ್ತಾನದ ಮಸೀದಿಯೊಂದರಲ್ಲಿ ಮಾಡಿರುವ ಭಾಷಣದ ಪ್ರಕಾರ ಮಸೂದ್ ಬಿಎಸ್ಎಫ್ ಕ್ಯಾಂಪ್ ನಲ್ಲಿ ನಡೆದಿರುವ ದಾಳಿಯ ಹಿಂದೆ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಕೈವಾಡ ಇರುವುದನ್ನು ಒಪ್ಪಿಕೊಂಡಿದ್ದು, ಜಿಹಾದ್ ನ್ನು ತೀವ್ರಗೊಳಿಸುವಂತೆ ಕರೆ ನೀಡಿದ್ದಾನೆ. 2000 ದಿಂದ ಪ್ರಾರಂಭವಾಗಿರುವ ಆತ್ಮಹತ್ಯಾ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಭಯೋತ್ಪಾದಕ ಮಸೂದ್ ಅಜರ್ ಹೇಳಿದ್ದಾನೆ. ಇತ್ತೀಚೆಗಷ್ಟೇ ಆತನ ಸಂಬಂಧಿಯಾಗಿದ್ದ ತಲ್ಹಾ ರಶೀದ್ ತನ್ನ ಇಬ್ಬರು ಸಹಚರರೊಂದಿಗೆ ಗಡಿಯಿಂದ ಒಳನುಸುಳುತ್ತಿದ್ದ ವೇಳೆ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿತ್ತು. ಈ ಬೆನ್ನಲ್ಲೇ ಮಸೂದ್ ಅಜರ್ ಈ ಹೇಳಿಕೆ ನೀಡಿದ್ದಾನೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT