ರ್ಯಾನ್ ಇಂಟರ್ ನ್ಯಾಷನಲ್ ಶಾಲೆ 
ದೇಶ

ಪ್ರದ್ಯುಮನ್ ಹತ್ಯೆ ಪ್ರಕರಣ: ಪರೀಕ್ಷೆ ಮುಂದೂಡಲು ಹತ್ಯೆ ಮಾಡಿದ್ದಾಗಿ ಪ್ರಥಮ ಪಿಯು ವಿದ್ಯಾರ್ಥಿ ತಪ್ಪೊಪ್ಪಿಗೆ- ಸಿಬಿಐ

ಗುರುಗ್ರಾಮದ ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ 2ನೇ ತರಗತಿಯ ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ.08 ರಂದು ಶಾಲೆಯ ಪ್ರಥಮ ಪಿಯು ವಿದ್ಯಾರ್ಥಿಯನ್ನು ಕೊಲೆ ಆರೋಪದಡಿ

ನವದೆಹಲಿ: ಗುರುಗ್ರಾಮದ ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ 2ನೇ ತರಗತಿಯ ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ.08 ರಂದು ಶಾಲೆಯ  ಪ್ರಥಮ ಪಿಯು ವಿದ್ಯಾರ್ಥಿಯನ್ನು ಕೊಲೆ ಆರೋಪದಡಿ ಬಂಧಿಸಿದ್ದು, ಬಾಲ ನ್ಯಾಯಮಂಡಳಿ ಎದುರು ಹಾಜರುಪಡಿಸಲಿದೆ. 
ಪರೀಕ್ಷೆ ಹಾಗೂ ಪೋಷಕರು-ಶಿಕ್ಷಕರ ಸಭೆಯನ್ನು ಮುಂದೂಡಲು ಸಹಕಾರಿಯಾಗುತ್ತದೆ ಎಂಬ ದುರಾಲೋಚನೆಯಿಂದ ಪ್ರದ್ಯುಮನ್ ಎಂಬ ವಿದ್ಯಾರ್ಥಿಯನ್ನು ಕೊಲೆ ಮಾಡಿರುವುದಾಗಿ ಪ್ರಥಮ ಪಿಯು ವಿದ್ಯಾರ್ಥಿ ಒಪ್ಪಿಕೊಂಡಿದ್ದಾನೆ ಎಂದು ಸಿಬಿಐ ಮಾಹಿತಿ ನೀಡಿದೆ.
ಕೊಲೆ ಆರೋಪದಡಿ ಮಗನ ಬಂಧನವನ್ನು ತಂದೆ ಖಚಿತಪಡಿಸಿದ್ದಾರೆ, ಆದರೆ ಬಂಧಿತ ಆರೋಪಿ ಬಾಲಾಪರಾಧಿಯಾಗಿರುವುದರಿಂದ ಸಿಬಿಐ ಈ ವರೆಗೂ ಅಧಿಕೃತ ಹೇಳಿಕೆ ನೀಡಿಲ್ಲ.
ವಿದ್ಯಾರ್ಥಿಯ ಬಂಧನವಾಗಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆತನ ತಂದೆ, ನನ್ನ ಮಗ ಅಪರಾಧ ಮಾಡಿಲ್ಲ, ಶೌಚಾಲಯದಲ್ಲಿ ವಿದ್ಯಾರ್ಥಿಯ ಮೃತದೇಹ ಇರುವುದನ್ನು ಶಿಕ್ಷಕರಿಗೆ ತಿಳಿಸಿದ್ದ ಎಂದು ಹೇಳಿದ್ದಾರೆ. ಸೆಪ್ಟೆಂಬರ್ 8ರಂದು 7 ವರ್ಷ ವಿದ್ಯಾರ್ಥಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು, ವಿದ್ಯಾರ್ಥಿಯ ಶವ ಶಾಲಾ ಶೌಚಾಲಯದಲ್ಲಿ ಪತ್ತೆಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT