ಪ್ರದ್ಯುಮನ್ ಹತ್ಯೆ ಪ್ರಕರಣ: 3 ದಿನಗಳ ಸಿಬಿಐ ವಶಕ್ಕೆ ಆರೋಪಿ ಬಾಲಕ 
ದೇಶ

ಪ್ರದ್ಯುಮನ್ ಹತ್ಯೆ ಪ್ರಕರಣ: 3 ದಿನಗಳ ಸಿಬಿಐ ವಶಕ್ಕೆ ಆರೋಪಿ ಬಾಲಕ

ಗುರುಗ್ರಾಮದ ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ 2ನೇ ತರಗತಿಯ ವಿದ್ಯಾರ್ಥಿ ಹತ್ಯೆ ಪ್ರಕರಣದ ಆರೋಪಿ ಪ್ರಥಮ ಪಿಯು ವಿದ್ಯಾರ್ಥಿಯನ್ನು 3 ದಿನಗಳ ಸಿಬಿಐ ವಶಕ್ಕೆ ನೀಡಿ ಬಾಲಾಪರಾಧಿ ನ್ಯಾಯ ಮಂಡಳಿ

ನವದೆಹಲಿ: ಗುರುಗ್ರಾಮದ ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ 2ನೇ ತರಗತಿಯ ವಿದ್ಯಾರ್ಥಿ ಹತ್ಯೆ ಪ್ರಕರಣದ ಆರೋಪಿ ಪ್ರಥಮ ಪಿಯು ವಿದ್ಯಾರ್ಥಿಯನ್ನು 3 ದಿನಗಳ ಸಿಬಿಐ ವಶಕ್ಕೆ ನೀಡಿ ಬಾಲಾಪರಾಧಿ ನ್ಯಾಯ ಮಂಡಳಿ ಆದೇಶ ನೀಡಿದೆ. 
ಆರೋಪಿ ವಿದ್ಯಾರ್ಥಿಯನ್ನು ಬಂಧಿಸಿದ್ದ ಸಿಬಿಐ, ಆತನನ್ನು 6 ದಿನಗಳ ವಶಕ್ಕೆ ನೀಡುವಂತೆ  ಕೋರಿತ್ತು, ಅಷ್ಟೇ ಅಲ್ಲದೇ ಹತ್ಯೆ ಘೋರ ಅಪರಾಧವಾಗಿದ್ದರಿಂದ ಆರೋಪಿಯನ್ನು ಬಾಲಾಪರಾಧಿ ಎಂದು ಪರಿಗಣಿಸದೇ ವಯಸ್ಕ ಅಪರಾಧಿ ಎಂದು ಪರಿಗಣಿಸಬೇಕೆಂದು ಸಿಬಿಐ ಮನವಿ ಮಾಡಿತ್ತು. ಸಿಬಿಐ ನ ಮನವಿಯನ್ನು ಆಲಿಸಿರುವ ನ್ಯಾಯಮಂಡಳಿ ಆರೋಪಿಯನ್ನು 3 ದಿನಗಳ ವಶಕ್ಕೆ ನೀಡಿದ್ದು, ಬೆಳಿಗ್ಗೆ 10-6 ರ ವರೆಗೆ ಮಾತ್ರ ಆರೋಪಿಯ ವಿಚಾರಾಣೆ ನಡೆಸಬೇಕು ಹಾಗೂ ಆ ಬಳಿಕ ಆತನನ್ನು ಬಾಲಾಪರಾಧಿಗಳಿರುವ ಸ್ಥಳಕ್ಕೆ ಕಳಿಸಬೇಕೆಂದು ಹೇಳಿದೆ. 
ಬಂಧನಕ್ಕೂ ಮುನ್ನ 4 ಬಾರಿ ವಿಚಾರಣೆ ನಡೆಸಿದಾಗಲೂ ಆರೋಪಿ ವಿದ್ಯಾರ್ಥಿ ತಪ್ಪು ಒಪ್ಪಿಕೊಂಡಿರಲಿಲ್ಲ, ಆದರೆ ಈಗ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಸಿಬಿಐ ಹೇಳಿದೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT