ಪ್ರಧಾನಿ ನರೇಂದ್ರ ಮೋದಿ 
ದೇಶ

ಹಿಮಾಚಲ ಪ್ರದೇಶ ಚುನಾವಣೆ: ಹಕ್ಕು ಚಲಾಯಿಸುವಂತೆ ಮತದಾರರಿಗೆ ಪಿಎಂ ಮನವಿ

ಹಿಮಾಚಲ ಪ್ರದೇಶ ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅರ್ಹ ಮತದಾರರೆಲ್ಲರು ತಮ್ಮ ....

ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅರ್ಹ ಮತದಾರರೆಲ್ಲರು ತಮ್ಮ ಹಕ್ಕು ಚಲಾಯಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ.
ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, ದೇವರ ನಾಡು ಎನಿಸಿರುವ ಹಿಮಾಚಲ ಪ್ರದೇಶದಲ್ಲಿ ಇಂದು ಮತದಾನ ನಡೆಯುತ್ತಿದೆ. ಪ್ರಜಾಪ್ರಭುತ್ವ ದೇಶವಾದ ನಮ್ಮಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಕೇಂದ್ರಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸುವಂತೆ ಮನವಿ ಮಾಡಿದ್ದಾರೆ. ದಾಖಲೆ ಸಂಖ್ಯೆಯಲ್ಲಿ ಇಂದು ಹಿಮಾಚಲ ಪ್ರದೇಶದಲ್ಲಿ ಮತದಾನವಾಗಬೇಕು ಎಂದು ಅವರು ಹೇಳಿದ್ದಾರೆ.
ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದ್ದು ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ.
ಈಗಿನ ಮುಖ್ಯಮಂತ್ರಿ, ಕಾಂಗ್ರೆಸ್ ಅಭ್ಯರ್ಥಿ ವೀರಭದ್ರ ಸಿಂಗ್ ಹಿಂದೆ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಭಾರತೀಯ ಜನತಾ ಪಾರ್ಟಿಯ ಪ್ರೇಮ್ ಕುಮಾರ್ ದುಮಲ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಬಹುಜನ ಸಮಾಜ ಪಕ್ಷ 42 ಕ್ಷೇತ್ರಗಳಲ್ಲಿ, ಸಿಪಿಎಂ 14 ಸ್ಥಾನಗಳಿಗೆ, ಸ್ವಾಭಿಮಾನ ಪಕ್ಷ ಮತ್ತು ಲೋಕ ಘಟ್ ಬಂದನ್ ಪಕ್ಷ 6 ಸ್ಥಾನಗಳಲ್ಲಿ ಮತ್ತು ಸಿಪಿಐ 3 ಸ್ಥಾನಗಳಿಗೆ ಸ್ಪರ್ಧಿಸುತ್ತಿದೆ.
ಚುನಾವಣೆ ಪ್ರಚಾರದ ವೇಳೆ ಭ್ರಷ್ಟಾಚಾರದ ಬಗ್ಗೆ ಜನರಿಗೆ ಅರಿವು ಮೂಡಿಸಿದ್ದು ಬಿಜೆಪಿಯ ಮುಖ್ಯ ಅಜೆಂಡವಾಗಿದ್ದರೆ, ಸರಕು ಮತ್ತು ಸೇವಾ ತೆರಿಗೆ ಹಾಗೂ ನೋಟುಗಳ ಅಮಾನ್ಯತೆ ಬಗ್ಗೆ ಬಿಜೆಪಿಯನ್ನು ಕಾಂಗ್ರೆಸ್ ಕಟ್ಟಿಹಾಕಲು ಪ್ರಯತ್ನಿಸಿತ್ತು.
ರಾಜ್ಯದಲ್ಲಿ ಒಟ್ಟು 50,25,941 ಮತದಾರರು ಇದ್ದು 7,525 ಮತಗಟ್ಟೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರ ಮತ್ತು ವಿವಿಪ್ಯಾಟ್ ಗಳ ಸಹಾಯದಿಂದ ಮತ ಚಲಾವಣೆ ನಡೆಯಲಿದೆ.
ಮತ ಎಣಿಕೆ ಡಿಸೆಂಬರ್ 18ರಂದು ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT