ಪ್ರಧಾನಿ ನರೇಂದ್ರ ಮೋದಿ 
ದೇಶ

ಹಿಮಾಚಲ ಪ್ರದೇಶ ಚುನಾವಣೆ: ಹಕ್ಕು ಚಲಾಯಿಸುವಂತೆ ಮತದಾರರಿಗೆ ಪಿಎಂ ಮನವಿ

ಹಿಮಾಚಲ ಪ್ರದೇಶ ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅರ್ಹ ಮತದಾರರೆಲ್ಲರು ತಮ್ಮ ....

ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅರ್ಹ ಮತದಾರರೆಲ್ಲರು ತಮ್ಮ ಹಕ್ಕು ಚಲಾಯಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ.
ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, ದೇವರ ನಾಡು ಎನಿಸಿರುವ ಹಿಮಾಚಲ ಪ್ರದೇಶದಲ್ಲಿ ಇಂದು ಮತದಾನ ನಡೆಯುತ್ತಿದೆ. ಪ್ರಜಾಪ್ರಭುತ್ವ ದೇಶವಾದ ನಮ್ಮಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಕೇಂದ್ರಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸುವಂತೆ ಮನವಿ ಮಾಡಿದ್ದಾರೆ. ದಾಖಲೆ ಸಂಖ್ಯೆಯಲ್ಲಿ ಇಂದು ಹಿಮಾಚಲ ಪ್ರದೇಶದಲ್ಲಿ ಮತದಾನವಾಗಬೇಕು ಎಂದು ಅವರು ಹೇಳಿದ್ದಾರೆ.
ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದ್ದು ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ.
ಈಗಿನ ಮುಖ್ಯಮಂತ್ರಿ, ಕಾಂಗ್ರೆಸ್ ಅಭ್ಯರ್ಥಿ ವೀರಭದ್ರ ಸಿಂಗ್ ಹಿಂದೆ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಭಾರತೀಯ ಜನತಾ ಪಾರ್ಟಿಯ ಪ್ರೇಮ್ ಕುಮಾರ್ ದುಮಲ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಬಹುಜನ ಸಮಾಜ ಪಕ್ಷ 42 ಕ್ಷೇತ್ರಗಳಲ್ಲಿ, ಸಿಪಿಎಂ 14 ಸ್ಥಾನಗಳಿಗೆ, ಸ್ವಾಭಿಮಾನ ಪಕ್ಷ ಮತ್ತು ಲೋಕ ಘಟ್ ಬಂದನ್ ಪಕ್ಷ 6 ಸ್ಥಾನಗಳಲ್ಲಿ ಮತ್ತು ಸಿಪಿಐ 3 ಸ್ಥಾನಗಳಿಗೆ ಸ್ಪರ್ಧಿಸುತ್ತಿದೆ.
ಚುನಾವಣೆ ಪ್ರಚಾರದ ವೇಳೆ ಭ್ರಷ್ಟಾಚಾರದ ಬಗ್ಗೆ ಜನರಿಗೆ ಅರಿವು ಮೂಡಿಸಿದ್ದು ಬಿಜೆಪಿಯ ಮುಖ್ಯ ಅಜೆಂಡವಾಗಿದ್ದರೆ, ಸರಕು ಮತ್ತು ಸೇವಾ ತೆರಿಗೆ ಹಾಗೂ ನೋಟುಗಳ ಅಮಾನ್ಯತೆ ಬಗ್ಗೆ ಬಿಜೆಪಿಯನ್ನು ಕಾಂಗ್ರೆಸ್ ಕಟ್ಟಿಹಾಕಲು ಪ್ರಯತ್ನಿಸಿತ್ತು.
ರಾಜ್ಯದಲ್ಲಿ ಒಟ್ಟು 50,25,941 ಮತದಾರರು ಇದ್ದು 7,525 ಮತಗಟ್ಟೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರ ಮತ್ತು ವಿವಿಪ್ಯಾಟ್ ಗಳ ಸಹಾಯದಿಂದ ಮತ ಚಲಾವಣೆ ನಡೆಯಲಿದೆ.
ಮತ ಎಣಿಕೆ ಡಿಸೆಂಬರ್ 18ರಂದು ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT