ದಾವೂದ್ ಇಬ್ರಾಹಿಂ 
ದೇಶ

ಭೂಗತ ಪಾತಕಿ ದಾವೂದ್‌ನ ಹೋಟೆಲ್ ಇನ್ನು ಸಾರ್ವಜನಿಕ ಶೌಚಾಲಯ!

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಒಡೆತನದ ಭಿಂಡಿ ಬಜಾರಿನ ಉಪಾಹಾರ ಗೃಹವನ್ನು ಖರೀದಿಸಿರುವ ಕಟ್ಟಾರ್ ಹಿಂದುತ್ವವಾದಿ ನಾಯಕ ಸ್ವಾಮಿ ಚಕ್ರಪಾಣಿ ಅವರು...

ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಒಡೆತನದ ಭಿಂಡಿ ಬಜಾರಿನ ಉಪಾಹಾರ ಗೃಹವನ್ನು ಖರೀದಿಸಿರುವ ಕಟ್ಟಾರ್ ಹಿಂದುತ್ವವಾದಿ ನಾಯಕ ಸ್ವಾಮಿ ಚಕ್ರಪಾಣಿ ಅವರು ಅದನ್ನು ಸಾರ್ವಜನಿಕ ಶೌಚಾಲಯವಾಗಿ ಪರಿವರ್ತಿಸಲು ಮುಂದಾಗಿದ್ದಾರೆ. 
1993ರ ಮುಂಬೈ ಸರಣಿ ಸ್ಫೋಟದ ರೂವಾರಿ ದಾವೂದ್ ಹೆಸರಿನಲ್ಲಿ ಬೆಲೆಬಾಳುವ ಅನೇಕ ಸ್ವತ್ತುಗಳು ಭಾರತದಲ್ಲಿದ್ದು ಅವೆಲ್ಲವನ್ನೂ ಸ್ವಾದೀನಕ್ಕೆ ತೆಗೆದುಕೊಂಡಿರುವ ಕೇಂದ್ರ ಸರ್ಕಾರ ಹರಾಜಿಗೆ ಪ್ರಯತ್ನಿಸುತ್ತಿದೆ. 
ಭೂಗತ ಪಾತಕಿಗೆ ಸೇರಿದ ಈ ಸ್ವತ್ತುಗಳು ವಾಸಕ್ಕೆ ಅಥವಾ ಉಪಾಹಾರ ಕೇಂದ್ರವಾಗಿ ಮರು ಬಳಕೆಯಾಗಬಾರದು ಎನ್ನುವುದು ಅಖಿಲ ಭಾರತ ಹಿಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸ್ವಾಮಿ ಚಕ್ರಪಾಣಿಯವರ ಬಲವಾದ ಧೋರಣೆಯಾಗಿದ್ದು ಅದಕ್ಕಾಗಿಯೇ ಅವರು ಈ ಸ್ವತ್ತುಗಳನ್ನು ಖರೀದಿಸುತ್ತಿದ್ದಾರೆ. 
ಹೋಟೆಲ್ ಅಫ್ರೋಜ್ ಅನ್ನು ಖರೀದಿಸಿದ ಬಳಿಕ ಅದನ್ನು ಸಾರ್ವಜನಿಕ ಟಾಯ್ಲೆಟ್ ಆಗಿ ಪರಿವರ್ತಿಸುತ್ತೇವೆ. ಅಲ್ಲಿ ನಾವು ಆಧುನಿಕ ಶೈಲಿಯ ಟಾಯ್ಲೆಟ್ ಕಟ್ಟಿಸಿ ಸಾರ್ವಜನಿಕರ ಉಚಿತ ಬಳಕೆಗೆ ಅನುವು ಮಾಡಿಕೊಡುತ್ತೇವೆ. ಟಾಯ್ಲೆಟ್ ಸಿದ್ಧಗೊಂಡ ನಂತರ ಸ್ವಚ್ಛ ಭಾರತ್ ಕಾರ್ಯಕ್ರಮದಡಿ ಅದರ ಉದ್ಘಾಟನೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ಅವರನ್ನು ಆಹ್ವಾನಿಸಲಾಗುವುದು ಎಂದರು. 
2015ರಲ್ಲಿ ದಾವೂದ್ ಇಬ್ರಾಹಿಂ ಬಳಸುತ್ತಿದ್ದ ಹುಂಡೈ ಆಕ್ಸೆಂಟ್ ಕಾರನ್ನು ಹರಾಜಿನಲ್ಲಿ 32 ಸಾವಿರ ರುಪಾಯಿಗೆ ಖರೀದಿಸಿದ್ದ ಚಕ್ರಪಾಣಿ ಅದನ್ನು ಸಾರ್ವಜನಿಕವಾಗಿ ಸುಟ್ಟು ಹಾಕಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT