ಗಾಂಧಿನಗರದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 
ದೇಶ

5 ವಿವಿಧ ತೆರಿಗೆ ಪದ್ಧತಿ ಬೇಡ, ಏಕರೂಪದ ತೆರಿಗೆ ನೀತಿ ಜಾರಿಗೆ ತನ್ನಿ: ರಾಹುಲ್ ಗಾಂಧಿ

ಏಕರೂಪದ ತೆರಿಗೆ ನೀತಿ ಜಿಎಸ್ ಟಿಯಲ್ಲಿ ರಚನಾತ್ಮಕ ಸುಧಾರಣೆಗಳು ಅನಿವಾರ್ಯ ಎಂದು ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

ನವದೆಹಲಿ: ಏಕರೂಪದ ತೆರಿಗೆ ನೀತಿ ಜಿಎಸ್ ಟಿಯಲ್ಲಿ ರಚನಾತ್ಮಕ ಸುಧಾರಣೆಗಳು ಅನಿವಾರ್ಯ ಎಂದು ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.
ನಾಲ್ಕನೇ ಬಾರಿಗೆ ಗುಜರಾತ್ ನಲ್ಲಿ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿ ಇಂದು ಗಾಂಧಿನಗರದಲ್ಲಿ ಬೆಂಬಲಿಗರನ್ನು ಉದ್ದೇಶಿಸಿತ ಮಾತನಾಡಿದರು. ಈ ವೇಳೆ ಜಿಎಸ್ ಟಿ ತೆರಿಗೆ ವ್ಯಾಪ್ತಿಯ ಶೇ.28ರ ವ್ಯಾಪ್ತಿಯಿಂದ 211  ಅಗತ್ಯ ವಸ್ತುಗಳನ್ನು ಶೇ.18ರ ವ್ಯಾಪ್ತಿಗೆ ತರಲಾಗಿದೆ. ಇದು ಕಾಂಗ್ರೆಸ್ ಪಕ್ಷ ಸತತ ಹೋರಾಟ ಮತ್ತು ಒತ್ತಡದ ಫಲವಾಗಿದೆ ಎಂದು ಹೇಳಿದರು. ಅಂತೆಯೇ ಕೇವಲ ತೆರಿಗೆ ಕಡಿತಗೊಳಿಸಿದರೆ ಮಾತ್ರ ಹಳಿ ತಪ್ಪಿರುವ ಆರ್ಥ ವ್ಯವಸ್ಥೆ  ದಾರಿಗೆ ಬರುವುದಿಲ್ಲ. ದೇಶದಲ್ಲಿ 5 ಬಗೆಯ ತೆರಿಗೆಗಳ ಬದಲಿಗೆ ದೇಶಾದ್ಯಂತ ಏಕರೂಪದ ತೆರಿಗೆ ನೀತಿ ಜಾರಿಯಾಗಬೇಕು. ಇದಕ್ಕಾಗಿ ಜಿಎಸ್ ಟಿಯಲ್ಲಿ ರಚನಾತ್ಮಕ ಸುಧಾರಣೆಗಳನ್ನು ತರಬೇಕು ಎಂದು ರಾಹುಲ್ ಗಾಂಧಿ  ಆಗ್ರಹಿಸಿದರು.
ಅಂತೆಯೇ ಸರ್ಕಾರದ ಅವೈಜ್ಞಾನಿಕ ತೆರಿಗೆ ನೀತಿ ವಿರುದ್ಧದ ತಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ ರಾಹುಲ್ ಗಾಂಧಿ, ಸರ್ಕಾರದ ಜಿಎಸ್ ಟಿ ಜಾರಿ ಪ್ರಕ್ರಿಯೆಯೇ ಸರಿಯಾಗಿರಲಿಲ್ಲ. ಜಿಎಸ್ ಟಿ ಜಾರಿ ಕುರಿತ  ಸರ್ಕಾರದ ನಿರ್ಧಾರ ಸರಿ ಇರಲಿಲ್ಲ. ಬಹುಶಃ ಪ್ರಧಾನಿ ಮೋದಿಗೆ ಅವರ ತಪ್ಪು ಈಗ ಅರಿವಾದಂತಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ; 26 ತಿಂಗಳ ಅರಿಯರ್ಸ್; ವೇತನ ಪರಿಷ್ಕರಣೆಗೆ ಒಪ್ಪಿಗೆ; ರದ್ದಾಗುತ್ತಾ ಮುಷ್ಕರ?

ಭಾರತದ AI ಸಾಮರ್ಥ್ಯವನ್ನು ಹೈಲೈಟ್ ಮಾಡಿದ ಗೂಗಲ್ ಸಿಇಒ ಸುಂದರ್ ಪಿಚ್ಚೈ: ಯುಎಸ್-ಭಾರತ ಸಹಯೋಗದ ಪ್ರಾಜೆಕ್ಟ್ ಘೋಷಣೆ! Video

'ಆಗಿದ್ದಾಯ್ತು ಬಿಡಿ.. ಏನ್ ಮಾಡೋಕ್ ಆಗುತ್ತೆ': S*X ನಿರಾಕರಿಸಿದ MBA ವಿದ್ಯಾರ್ಥಿನಿ ಕತ್ತು ಸೀಳಿದ ಧೂರ್ತನ ಮಾತು! Video

T20 ವಿಶ್ವಕಪ್ 2026: ಶಿವಂ ದುಬೆ ಸ್ಫೋಟಕ ಅರ್ಧಶತಕ; ನೆದರ್ಲೆಂಡ್ ಗೆ ಗೆಲ್ಲಲು 194 ರನ್ ಗುರಿ ನೀಡಿದ ಭಾರತ

ಇಂಡಿಯಾ AI ಇಂಪ್ಯಾಕ್ಟ್ ಸಮ್ಮಿಟ್ ನಲ್ಲಿ 'ರೋಬೋಡಾಗ್' ವಿವಾದ, ಕ್ಷಮೆಯಾಚಿಸಿದ ಗ್ಯಾಲ್ಗೋಟಿಯಾಸ್ ವಿವಿ!

SCROLL FOR NEXT