ಗಾಂಧಿನಗರದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 
ದೇಶ

5 ವಿವಿಧ ತೆರಿಗೆ ಪದ್ಧತಿ ಬೇಡ, ಏಕರೂಪದ ತೆರಿಗೆ ನೀತಿ ಜಾರಿಗೆ ತನ್ನಿ: ರಾಹುಲ್ ಗಾಂಧಿ

ಏಕರೂಪದ ತೆರಿಗೆ ನೀತಿ ಜಿಎಸ್ ಟಿಯಲ್ಲಿ ರಚನಾತ್ಮಕ ಸುಧಾರಣೆಗಳು ಅನಿವಾರ್ಯ ಎಂದು ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

ನವದೆಹಲಿ: ಏಕರೂಪದ ತೆರಿಗೆ ನೀತಿ ಜಿಎಸ್ ಟಿಯಲ್ಲಿ ರಚನಾತ್ಮಕ ಸುಧಾರಣೆಗಳು ಅನಿವಾರ್ಯ ಎಂದು ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.
ನಾಲ್ಕನೇ ಬಾರಿಗೆ ಗುಜರಾತ್ ನಲ್ಲಿ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿ ಇಂದು ಗಾಂಧಿನಗರದಲ್ಲಿ ಬೆಂಬಲಿಗರನ್ನು ಉದ್ದೇಶಿಸಿತ ಮಾತನಾಡಿದರು. ಈ ವೇಳೆ ಜಿಎಸ್ ಟಿ ತೆರಿಗೆ ವ್ಯಾಪ್ತಿಯ ಶೇ.28ರ ವ್ಯಾಪ್ತಿಯಿಂದ 211  ಅಗತ್ಯ ವಸ್ತುಗಳನ್ನು ಶೇ.18ರ ವ್ಯಾಪ್ತಿಗೆ ತರಲಾಗಿದೆ. ಇದು ಕಾಂಗ್ರೆಸ್ ಪಕ್ಷ ಸತತ ಹೋರಾಟ ಮತ್ತು ಒತ್ತಡದ ಫಲವಾಗಿದೆ ಎಂದು ಹೇಳಿದರು. ಅಂತೆಯೇ ಕೇವಲ ತೆರಿಗೆ ಕಡಿತಗೊಳಿಸಿದರೆ ಮಾತ್ರ ಹಳಿ ತಪ್ಪಿರುವ ಆರ್ಥ ವ್ಯವಸ್ಥೆ  ದಾರಿಗೆ ಬರುವುದಿಲ್ಲ. ದೇಶದಲ್ಲಿ 5 ಬಗೆಯ ತೆರಿಗೆಗಳ ಬದಲಿಗೆ ದೇಶಾದ್ಯಂತ ಏಕರೂಪದ ತೆರಿಗೆ ನೀತಿ ಜಾರಿಯಾಗಬೇಕು. ಇದಕ್ಕಾಗಿ ಜಿಎಸ್ ಟಿಯಲ್ಲಿ ರಚನಾತ್ಮಕ ಸುಧಾರಣೆಗಳನ್ನು ತರಬೇಕು ಎಂದು ರಾಹುಲ್ ಗಾಂಧಿ  ಆಗ್ರಹಿಸಿದರು.
ಅಂತೆಯೇ ಸರ್ಕಾರದ ಅವೈಜ್ಞಾನಿಕ ತೆರಿಗೆ ನೀತಿ ವಿರುದ್ಧದ ತಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ ರಾಹುಲ್ ಗಾಂಧಿ, ಸರ್ಕಾರದ ಜಿಎಸ್ ಟಿ ಜಾರಿ ಪ್ರಕ್ರಿಯೆಯೇ ಸರಿಯಾಗಿರಲಿಲ್ಲ. ಜಿಎಸ್ ಟಿ ಜಾರಿ ಕುರಿತ  ಸರ್ಕಾರದ ನಿರ್ಧಾರ ಸರಿ ಇರಲಿಲ್ಲ. ಬಹುಶಃ ಪ್ರಧಾನಿ ಮೋದಿಗೆ ಅವರ ತಪ್ಪು ಈಗ ಅರಿವಾದಂತಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ