ತ್ರಿವಳಿ ತಲಾಖ್ 
ದೇಶ

ಸುಪ್ರೀಂ ಕೋರ್ಟ್ ತೀರ್ಪನ್ನೂ ಲೆಕ್ಕಿಸದೇ ಪತ್ನಿಗೆ ತಲಾಖ್ ನೀಡಿದ ಅಲೀಘರ್ ಮುಸ್ಲಿಂ ವಿವಿ ಪ್ರೊಫೆಸರ್!

ತ್ರಿವಳಿ ತಲಾಖ್ ವಿರುದ್ಧ ಸುಪ್ರೀಂ ಕೋರ್ಟ್ 2 ತಿಂಗಳ ಹಿಂದೆ ತೀರ್ಪು ನೀಡಿತ್ತಾದರೂ ಈ ತೀರ್ಪನ್ನು ಲೆಕ್ಕಿಸದೇ ಅಲೀಘರ್ ಮುಸ್ಲಿಂ ವಿಶ್ವವಿದ್ಯಾನಿಲಯದ ಸಂಸ್ಕೃತ ವಿಭಾಗದ ಪ್ರೊಫೆಸರ್ ತನ್ನ ಪತ್ನಿಗೆ ತಲಾಖ್ ನೀಡಿದ್ದಾರೆ.

ಆಗ್ರಾ: ತ್ರಿವಳಿ ತಲಾಖ್ ವಿರುದ್ಧ ಸುಪ್ರೀಂ ಕೋರ್ಟ್ 2 ತಿಂಗಳ ಹಿಂದೆ ತೀರ್ಪು ನೀಡಿತ್ತಾದರೂ ಈ ತೀರ್ಪನ್ನು ಲೆಕ್ಕಿಸದೇ ಅಲೀಘರ್ ಮುಸ್ಲಿಂ ವಿಶ್ವವಿದ್ಯಾನಿಲಯದ ಸಂಸ್ಕೃತ ವಿಭಾಗದ ಪ್ರೊಫೆಸರ್ ತನ್ನ ಪತ್ನಿಗೆ ತಲಾಖ್ ನೀಡಿದ್ದಾರೆ. 
ಪ್ರೊಫೆಸರ್ ಖಾಲೀದ್ ಬಿನ್ ಯೂಸೂಫ್ ಖಾನ್ ತನ್ನ ಪತ್ನಿಗೆ ವಾಟ್ಸ್ ಆಪ್ ನಲ್ಲಿ ತಲಾಖ್ ನೀಡಿರುವ ವ್ಯಕ್ತಿಯಾಗಿದ್ದಾರೆ. ಪತಿ ತಲಾಖ್ ನೀಡಿರುವುದನ್ನು ವಿರೋಧಿಸಿರುವ ಪತ್ನಿ, ತನಗೆ ನ್ಯಾಯ ಸಿಗದೇ ಇದ್ದರೆ ವಿಶ್ವವಿದ್ಯಾನಿಲಯದ ಉಪಕುಲಪತಿ ನಿವಾಸದ ಎದುರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ. 
ಯಸ್ಮೀನ್ ಖಾಲೀದ್ ತಲಾಖ್ ನ ಸಂತ್ರಸ್ತೆಯಾಗಿದ್ದು, ಮೊದಲು ವಾಟ್ಸ್ ಆಪ್ ನಲ್ಲಿ ತಲಾಖ್ ನೀಡಿದ್ದಾರೆ. ನಂತರ ಟೆಕ್ಸ್ಟ್ ಮೆಸೇಜ್ ಮೂಲಕ ತಲಾಖ್ ನೀಡಿದ್ದಾರೆ. ಈಗ ತಮಗೆ ಹಾಗೂ ತಮ್ಮ ಮಕ್ಕಳಿಗೆ ಅನ್ಯಾಯವಾಗಿದ್ದು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಎದುರಿಸುತ್ತಿದ್ದೇವೆ ಎಂದು ಅಳಲು ತೋಡಿದ್ದಾರೆ.  ಒಂದು ವೇಳೆ ತಮಗೆ ನ್ಯಾಯ ಸಿಗದೇ ಹೋದಲ್ಲಿ ವಿಶ್ವವಿದ್ಯಾನಿಲಯದ ಉಪಕುಲಪತಿ ತರೀಖ್ ಮನ್ಸೂರ್ ಅವರ ನಿವಾಸದ ಎದುರು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. 
ಇನ್ನು ತಮ್ಮ ವಿರುದ್ಧದ ಆರೋಪವನ್ನು ನಿರಾಕರಿಸಿರುವ ಖಾನ್, ಕೇವಲ ವಾಟ್ಸ್ ಆಪ್, ಟೆಕ್ಸ್ಟ್ ಮೆಸೇಜ್ ನಲ್ಲಿ ತಲಾಖ್ ನೀಡಿರುವುದಷ್ಟೇ ಅಲ್ಲದೇ ಶರಿಯಾ ಪ್ರಕಾರ ಮತ್ತೂ ಒಂದು ತಲಾಖ್ ನೀಡುವುದಾಗಿ ಇಬ್ಬರ ಸಮ್ಮುಖದಲ್ಲಿ ಹೇಳಿರುವುದಾಗಿ ಖಾನ್ ತಿಳಿಸಿದ್ದಾರೆ. ಪ್ರಕರಣದಲ್ಲಿ ತಾವೇ ಬಲಿಪಶು ಎಂದು ಹೇಳಿಕೊಂಡಿರುವ ಖಾನ್ ನಮ್ಮ ವಿವಾಹಕ್ಕೂ ಮುನ್ನ ಆಕೆ ತಾನು ಪದವೀಧರೆ ಎಂದು ನನಗೆ ಸುಳ್ಳು ಮಾಹಿತಿ ನೀಡಿದ್ದಾಳೆ, ಆದ್ದರಿಂದ ಆಕೆಗೆ ಮೂರನೆ ತಲಾಖ್ ನ್ನೂ ನೀಡುತ್ತೇನೆ, ಯಾರೂ ನನ್ನನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT