ಅಮಾನತಾದ ವೈದ್ಯ ಅರುಣಾಚಲ್ ಚೌದರಿ (ಫೇಸ್ ಬುಕ್ ಚಿತ್ರ)
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮಿತಿ ಮೀರಿರುವ ಡೆಂಘೀ ನಿಯಂತ್ರಣ ಸಂಬಂಧ ಸರ್ಕಾರದ ನಿರ್ಲಕ್ಷತನ ಹಾಗೂ ತಮ್ಮ ಅಸಹಾಯಕತೆ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದ ಸರ್ಕಾರಿ ವೈದ್ಯರನ್ನು ಪಶ್ಟಿಮ ಬಂಗಾಳ ಸರ್ಕಾರ ಅಮಾನತು ಮಾಡಿದೆ.
ರಾಜ್ಯದಲ್ಲಿ ಹೆಚ್ಚಾಗಿರುವ ಡೆಂಘಿ ಜ್ವರ ಹೆಚ್ಚಿರುವ ಬಗ್ಗೆ ನೈಜ ಸ್ಥಿತಿಯನ್ನು ಫೇಸ್ ಬುಕ್ನಲ್ಲಿ ಬರೆದುಕೊಂಡಿದ್ದ ವೈದ್ಯ ಅರುಣಾಚಲ ದತ್ತ ಚೌಧರಿ ಎಂಬವವರನ್ನು ಪಶ್ಚಿಮ ಬಂಗಾಳ ಆರೋಗ್ಯ ಇಲಾಖೆ ಶನಿವಾರ ಅಮಾನತು ಮಾಡಿದೆ. ಅರುಣಾಚಲ ದತ್ತ ಚೌಧರಿ ಅವರ ಬರಹ ಸಾರ್ವಜನಿಕರನ್ನು ತಪ್ಪು ಅಭಿಪ್ರಾಯ ಮೂಡಲು ಕಾರಣವಾಗಿದೆ. ಅಲ್ಲದೇ ಆಸ್ಪತ್ರೆಗಳ ಆಡಳಿತಕ್ಕೆ ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.
ಬರಾಸತ್ ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿ ಅರುಣಾಚಲ್ ಅವರನ್ನು ಈ ಹಿಂದೆ ನೇಮಿಸಲಾಗಿತ್ತು. 500 ಮಂದಿ ಡೆಂಘಿ ಜ್ವರ ಪೀಡಿತರು ಆಸ್ಪತ್ರೆಗೆ ದಾಖಲಾಗಿದ್ದಾರೆ. ರೋಗ ಪತ್ತೆ ಮಾಡುವ ಸವಾಲಿನ ಕುರಿತು ಬರೆದುಕೊಂಡಿರುವ ಅವರು ಅನೇಕ ರೋಗಿಗಳು ನೆಲದ ಮೇಲೆ ಮಲಗುವ ಸ್ಥಿತಿಯಿದೆ ಎಂದು ಅಕ್ಟೋಬರ್ 6ರಂದು ಬರೆದಿದ್ದರು. ಅಲ್ಲದೆ ಓಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಿದ್ದರೂ ಈವರೆಗೂ ಕ್ರಮ ಕೈಗೊಂಡಿಲ್ಲ ಎಂದು ತಮ್ಮ ಅಸಹಾಯಕತೆ ಬರೆದುಕೊಂಡಿದ್ದರು. ಇದೇ ಕಾರಣಕ್ಕೆ ವೈದ್ಯ ಅರುಣಾಚಲ್ ರನ್ನು ಅಮಾನತು ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಇನ್ನು ವೈದ್ಯ ಅರುಣಾಚಲ್ ಅಮಾನತು ಕ್ರಮವನ್ನು ಖಂಡಿಸಿ ಪಶ್ಚಿಮ ಬಂಗಾಳದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ವೈದ್ಯರ ಅಮಾನತು ಪ್ರಶ್ನಿಸಿ ವಿಪಕ್ಷಗಳು ಮಮತಾ ಸರ್ಕಾರವನ್ನು ಟೀಕಿಸುತ್ತಿವೆ, ಅಲ್ಲದೆ 18,000 ಡೆಂಘಿ ಪ್ರಕರಣಗಳಲ್ಲಿ 19 ಮಂದಿ ಮೃತಪಟ್ಟಿದ್ದಾರೆ ಎಂದು ಸರ್ಕಾರ ಹೇಳಿದೆ. ಆದರೆ, ಮೃತರ ಸಂಖ್ಯೆಯನ್ನು ಮಮತಾ ಬ್ಯಾನರ್ಜಿ ಸರ್ಕಾರ ಮುಚ್ಚಿಟ್ಟಿದೆ ಎಂದು ವಿರೋಧಪಕ್ಷಗಳು ಆರೋಪಿಸಿವೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos